ದೊರೆಸ್ವಾಮಿ ಬಗ್ಗೆ ಬಸನ ಗೌಡ ಪಾಟೀಲ ಯತ್ನಾಳ್‌ ಹೇಳಿಕೆ ಖಂಡನಾರ್ಹ – ಖಾದರ್‌…

ಮಂಗಳೂರು : ಸ್ವಾತಂತ್ಯ್ರ ಹೋರಾಟಗಾರ ದೊರೆಸ್ವಾಮಿ ಬಗ್ಗೆ ಬಸನ ಗೌಡ ಪಾಟೀಲ ಯತ್ನಾಳ್‌ ಹೇಳಿಕೆ ಖಂಡಾನಾರ್ಹ. ಗಾಂಧಿ ನಡೆಸಿದ ಸ್ವಾತಂತ್ರ ಹೋರಾಟವನ್ನು ಇವರು ಟೀಕೆ ಮಾಡುತ್ತಿದ್ದು ಇದು ಅವರ ಹಿಡನ್‌ ಅಜೆಂಡವಾಗಿದೆ ಎಂದು ಶಾಸಕ ಯು ಟಿ ಖಾದರ್‌ ಹೇಳಿದ್ದಾರೆ.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಯತ್ನಾಳ್‌ ಈ ಹೇಳಿಕೆ ಬಗ್ಗೆ ಬಿಜೆಪಿಯ ನಿಲುವು ಯಾವುದು ಎಂದು ನಳಿನ್‌ ಕುಮಾರ್‌ ಕಟೀಲ್‌ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.

ಇನ್ನೇನು ಬಜೆಟ್‌ ಅಧಿವೇಶನ ನಡೆಯಲಿದೆ. ಈ ಅಧಿವೇಶನದಲ್ಲಿ ಸರ್ಕಾರದ ಲೋಪಗಳನ್ನು ಯಾರು ಚರ್ಚೆ ಮಾಡದೆ ಈ ಹೇಳಿಕೆಗಳ ಕುರಿತಾಗಿಯೇ ಚರ್ಚೆ ನಡೆಸಲು ಈ ರೀತಿಯಾಗಿ ಹೇಳಿಕೆ ನೀಡುತ್ತಿದ್ದಾರೆ. ಇದು ವ್ಯವಸ್ಥಿತ ಷಡ್ಯಂತ್ರ ಎಂದು ಆರೋಪಿಸಿದ ಅವರು ದೆಹಲಿ ಹಿಂಸಾಚಾರದ ಕುರಿತಾಗಿ ಮಾತನಾಡಿ, ದೆಹಲಿ ಹಿಂಸಾಚಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್‌ ನೇರ ಹೊಣೆ ಅವರು ರಾಜೀನಾಮೆ ನೀಡಬೇಕು” ಎಂದು ಹೇಳಿದರು.
ವಿಧಾನಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಮಂಗಳೂರು ಘಟನೆಯ ಬಗ್ಗೆ ಮಾತನಾಡಿರುವುದು ಶೋಚನಿಯ. ಘಟನೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲದೇ ಮಾತನಾಡಿರುವುದು ಮಂಗಳೂರು ಕ್ಷೇತ್ರಕ್ಕೆ ಕಳಂಕ ತರುವಂತಹದು. ಆ ಹಿನ್ನಲೆಯಲ್ಲಿ ಅವರು ಕೂಡಲೇ ಮಂಗಳೂರು ಜನತೆಯಲ್ಲಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಇನ್ನೂ ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್‌ ಮುಸ್ಲಿಯಾರ್‌ ಅವರ ಕೊಲೆಗೆ ಯತ್ನ ನಡೆದಿದೆ ಎಂಬ ವಿಚಾರದ ಬಗ್ಗೆ ತನಿಖೆ ನಡೆಯಬೇಕು. ಇದರ ಹಿಂದೆ ಯಾರೇ ಇದ್ದರೂ ಅವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾ ಯಿಸಿದರು.

Sponsors

Related Articles

Leave a Reply

Your email address will not be published. Required fields are marked *

Back to top button