ಶ್ರೀರಾಮ ಪದವಿ ಕಾಲೇಜು – 2ನೇ ಡೋಸ್ ಲಸಿಕಾ ಅಭಿಯಾನ…

ಬಂಟ್ವಾಳ : ಶ್ರೀರಾಮ ಪದವಿ ಕಾಲೇಜ್ ನಲ್ಲಿ ವಿದ್ಯಾರ್ಥಿಗಳಿಗೆ 2ನೇ ಡೋಸ್ ಲಸಿಕಾ ಅಭಿಯಾನ ಉದ್ಘಾಟನಾ ಸಮಾರಂಭವು ಸೆ. 22 ನಡೆಯಿತು.
ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ರವಿರಾಜ್ ಶ್ರೀಮಾನ್ ಅಭಿಯಾನವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಶ್ರೀ ರಾಮ ಪದವಿ ಕಾಲೇಜ್ ನ ಪ್ರಾಚಾರ್ಯರಾದ ಕೃಷ್ಣಪ್ರಸಾದ್ ಕಾಯರ್ಕಟ್ಟೆ, ಶ್ರೀರಾಮ ಸೌಹಾರ್ದ ಸಹಕಾರಿ ಬ್ಯಾಂಕ್ನ ಮ್ಯಾನೇಜರ್ ಜಗದೀಶ್ ಕಲ್ಲಡ್ಕ, ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಪದ್ಮನಾಭ ಬಿ. ಸಿ ರೋಡ್, ಆರೋಗ್ಯ ನಿರೀಕ್ಷಣಾ ಅಧಿಕಾರಿ ವೀರೇಶ್ , ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಸರಸ್ವತಿ, ಅಂಗನವಾಡಿ ಕಾರ್ಯಕರ್ತೆಯರು , ಕೋವಿಡ್ ನೋಡೆಲ್ ಅಧಿಕಾರಿ ಶುಭಲತಾ, ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಯತಿರಾಜ್ ಮತ್ತು ಉಪನ್ಯಾಸಕರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Sponsors

Related Articles

Back to top button