ಶ್ರೀಮತಿ ಶಾಂತ ಇವರಿಗೆ ಚೈತನ್ಯಶ್ರೀ ರಾಜ್ಯಪ್ರಶಸ್ತಿ…

ಪುತ್ತೂರು: ಕಥಾಬಿಂದು ಪ್ರಕಾಶನ 13ನೇ ವಾರ್ಷಿಕೋತ್ಸವ ಹಾಗೂ ಕಥಾಬಿಂದು ಸಾಹಿತ್ಯ ಸಾಂಸ್ಕ್ರತಿಕ ವೇದಿಕೆ ಹಾಗೂ ದಕ್ಷಿಣಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನ ಇದರ ಸಹಯೋಗದಲ್ಲಿ ನಡೆದ ಸಾಹಿತ್ಯೋತ್ಸವದಲ್ಲಿ ಯೋಗ,ಸಾಹಿತ್ಯ,ಗೈಡ್ಸ್ ಹೀಗೆ ಹಲವಾರು ಸಂಘಟನೆಗಳಲ್ಲಿ ತೊಡಗಿರುವ ಕಂಬಳಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಕನ್ಯಾನ ಸರಕಾರಿ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸಿ ಪ್ರಸ್ತುತ ಸರಕಾರಿ ಪ್ರೌಢಶಾಲೆ ಕಬಕ ಪುತ್ತೂರಿನಲ್ಲಿ ಕನ್ನಡ ಭಾಷಾ ಶಿಕ್ಷಕಿಯಾಗಿರುವ ,ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಕೇಂದ್ರ ಸಮಿತಿ ಬೆಂಗಳೂರು ಇದರ ಪುತ್ತೂರು ತಾಲೂಕು ಅಧ್ಯಕ್ಷೆ ಹಾಗೂ ಕರ್ನಾಟಕ ಚುಟುಕು ಸಾಹಿತ್ಯಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿಯಾಗಿರುವ ಶಾಂತ ಇವರಿಗೆ ಚೈತನ್ಯಶ್ರೀ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು,ತೀಯಸಮಾಜ ಮುಂಬೈಯ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಬೆಳ್ಚಡ,ಶ್ರೀ ಧನಲಕ್ಷ್ಮೀ ಕ್ಯಾಶೂ ಮೂಡಬಿದ್ರೆಯ ಶ್ರೀಪತಿ ಭಟ್,ದ.ಕ.ಜಿಲ್ಲಾ ಕ.ಸಾ.ಪ.ಅಧ್ಯಕ್ಷರಾದ ಎಸ್.ಪ್ರದೀಪ್ ಕುಮಾರ್ ಕಲ್ಕೂರ,ಪಿಂಗಾರ ಪತ್ರಿಕೆ ಸಂಪಾದಕರಾದ ರೇಮಂಡ್ ಡಿಕುನಾ ತಾಕೊಡೆ,ದ.ಕ.ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಅಧ್ಯಕ್ಷರಾದ ಡಾ.ಸುರೇಶ ನೆಗಳಗುಳಿ,ಸಂದೇಶ ಸಂಸ್ಕ್ರತಿ ಮತ್ತು ಶಿಕ್ಷಣ ಪ್ರತಿಷ್ಠಾನದ ನಿರ್ದೇಶಕರಾದ ವಂ.ಫಾ.ಪ್ರಾನ್ಸಿಸ್ ಅಸ್ಸೀಸಿ ಅಲ್ಮೇಡಾ,ನಿವೃತ್ತ ವಿಜಯ ಬ್ಯಾಂಕ್ ಪ್ರಬಂಧಕರಾದ ಬೆಟ್ಟಂಪಾಡಿ ಸುಂದರಶೆಟ್ಟಿ,ಉಡುಪಿ ಪತ್ರಕರ್ತರ ವೇದಿಕೆ ಅಧ್ಯಕ್ಷರಾದ ಡಾ.ಶೇಖರ್ ಅಜೆಕಾರ್,ಅಂತರಾಷ್ಟ್ರೀಯ ಚಿತ್ರಕಲಾವಿದರಾದ ಬಿ.ಕೆ.ಮಾಧವರಾವ್,ಲೇಖಕ,ಕಾದಂಬರಿಗಾರ, ಕಥಾಬಿಂದು ಸಾಂಸ್ಕೃತಿಕ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಪಿ.ವಿ.ಪ್ರದೀಪ್ ಕುಮಾರ್,ಹರಿಶ್ಚಂದ್ರ ಸಾಲ್ಯಾನ್,ಸಿರಿಗನ್ನಡ ಮಹಿಳಾವೇದಿಕೆ ರಾಜ್ಯ ಉಪಾಧ್ಯಕ್ಷೆ ರಜನಿ ಅಶೋಕ ಜೀರಗ್ಯಾಳ ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button