ದ. ಕ. ಜಿಲ್ಲೆಯಲ್ಲಿ ದಾಖಲಾಗಿದ್ದ ಮೊದಲ ಕೊರೊನಾ ಸೋಂಕಿತ ಗುಣಮುಖ…

ಮಂಗಳೂರು: ದ.ಕ. ಜಿಲ್ಲೆಯಲ್ಲಿ ದಾಖಲಾಗಿದ್ದ ಮೊದಲ ಕೊರೊನಾ ಸೋಂಕಿತ ಸಂಪೂರ್ಣ ಗುಣಮುಖವಾಗಿದ್ದು ನಾಳೆ ಡಿಸ್ಚಾರ್ಜ್ ಆಗಲಿದ್ದಾರೆ.
ಭಟ್ಕಳ ಮೂಲದ 22 ವರ್ಷದ ಯುವಕ ಕೊರೊನಾ ಸೋಂಕಿನಿಂದ ಗುಣಮುಖವಾಗಿದ್ದಾನೆ. ಈತ ಮಾರ್ಚ್ 19 ರಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ.‌ ಎಪ್ರಿಲ್ 2 ಮತ್ತು ಎಪ್ರಿಲ್ 3 ರಂದು ಈತನ ಗಂಟಲು ದ್ರವವನ್ನು ಪುನರ್ ಪರೀಕ್ಷೆಗೆ ಕಳುಹಿಸಲಾಗಿತ್ತು. ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದು ನಾಳೆ ಡಿಸ್ಚಾರ್ಜ್ ಗೊಳ್ಳಲಿದ್ದಾರೆ.
ನಿನ್ನೆ ಕಳುಹಿಸಲಾಗಿದ್ದ 28 ಗಂಟಲು ದ್ರವದ ಪರೀಕ್ಷೆಯ ವರದಿ ಕೂಡ ನೆಗೆಟಿವ್ ಬಂದಿದೆ. ಈವರೆಗೆ 12 ಜನ ಕೊರೊನಾ ದೃಢಪಟ್ಟಿದ್ದು ಇದರಲ್ಲಿ ಓರ್ವ ಗುಣಮುಖನಾಗಿದ್ದು ಇನ್ನೂ 11 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾರ್ಚ್ 19ರಂದು ಭಟ್ಕಳ ಮೂಲದ ವ್ಯಕ್ತಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಆಗಮಿಸಿದ್ದ. ವಿಮಾನ ನಿಲ್ದಾಣದಲ್ಲಿ ತಪಾಸಣೆ ಸಂದರ್ಭ ಆತನಲ್ಲಿ ಕೊರೊನಾ ಸೋಂಕು ಲಕ್ಷಣಗಳು ಕಂಡುಬಂದಿತ್ತು. ತಕ್ಷಣ ಆತನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಏಪ್ರಿಲ್ 6ರಂದು ಗುಣಮುಖನಾದ ವ್ಯಕ್ತಿಯನ್ನು ಡಿಸ್ಚಾರ್ಜ್ ಮಾಡಲಾಗುವುದೆಂದು, ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button