ಅಖಿಲ ಭಾರತ ಬ್ಯಾರಿ ಪರಿಷತ್ ಅಧ್ಯಕ್ಷರಾಗಿ ಆಯ್ಕೆಯಾದ ಖಾಲಿದ್ ಅವರಿಗೆ ಸನ್ಮಾನ…

ಮಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಬ್ಯಾರಿ ಪರಿಷತ್ ಮಹಾಸಭೆಯಲ್ಲಿ ಅಖಿಲ ಬ್ಯಾರಿ ಪರಿಷತ್ ಅಧ್ಯಕ್ಷರಾಗಿ ಆಯ್ಕೆಯಾದ ಸುಳ್ಯ ಜನತಾ ಗ್ರೂಪ್ಸ್ ಕುಟುಂಬ ಸದಸ್ಯರಾದ ಖಾಲಿದ್ ಉಜಿರೆ ಯವರನ್ನು ಮಂಗಳೂರಿನಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ದ. ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಉಪಾಧ್ಯಕ್ಷ ಕೆ. ಎಂ. ಮುಸ್ತಫ, ಸುಳ್ಯ ನಗರ ಪಂಚಾಯತ್ ಸದಸ್ಯ ಕೆ ಎಸ್ ಉಮ್ಮರ್, ಕೆಎಂಸಿಸಿ ಜಿಲ್ಲಾ ಖಜಾಂಚಿ ಇಬ್ರಾಹಿಂ ಕತ್ತಾರ್, ಅಬ್ದುಲ್ ರೆಹಮಾನ್ ಬಿಳಿಯಾರ್,ಅಖಿಲ ಭಾರತ ಬ್ಯಾರಿ ಪರಿಷತ್ ಸಲಹಾ ಸಮಿತಿ ಯೂಸುಫ್ ವೊಕ್ತರ್, ಕೋಶಾಧಿಕಾರಿ ನಿಸಾರ್ ಫಕೀರ್ ಮಹಮ್ಮದ್, ಪದಾಧಿಕಾರಿ ನಡುಪದವು ಉಪಸ್ಥಿತರಿದ್ದರು.

Sponsors

Related Articles

Back to top button