ಕುದ್ರೆಬೆಟ್ಟು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ…

ಶಿಕ್ಷಕರು ಆತ್ಮವಲೋಕನ ಮಾಡಿಕೊಳ್ಳಬೇಕು – ಜಯಾನಂದ ಪೆರಾಜೆ...

ಬಂಟ್ವಾಳ : ಶಿಕ್ಷಕರು ವಿದ್ಯಾರ್ಥಿಗಳನ್ನು ಶಾಲಾ ಸ್ವಚ್ಚತೆಗೆ ಬಳಸಿಕೊಳ್ಳುವುದರ ಬಗ್ಗೆ ಪರ ವಿರೋಧ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಸೂಕ್ತ ವ್ಯವಸ್ಥೆಯನ್ನು ಮಾಡಲು ಸರಕಾರಕ್ಕೆ ಮನವಿ ಮಾಡಲಾಗುವುದು ಎಂದು ರಾಜ್ಯ ನೌಕರಿ ಸಂಘದ ಕಾರ್ಯದರ್ಶಿ ಸಂತೋಷ್ ಕುಮಾರ್ ಬಾಳ್ತಿಲ ಹೇಳಿದರು.
ಅವರು ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಿಗಾಗಿ ಏರ್ಪಡಿಸಿದ ತರಬೇತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ತರಬೇತು ದಾರ ಜಯಾನಂದ ಪೆರಾಜೆ ಮಾತನಾಡಿ ಶಿಕ್ಷಕರು ಸ್ವ ಮೌಲ್ಯಮಾಪನ ಮಾಡುವ ಮೂಲಕ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಮೇಲ್ಪಂಕ್ತಿಯಾಗಬೇಕು ಎಂದು ತಿಳಿಸಿದರು.
ಗ್ರಾ.ಪಂ ಅಧ್ಯಕ್ಷ ವಿಠಲ ಬಾಳ್ತಿಲ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಗುರುಗಳು ಮಕ್ಕಳಿಗೆ ಮಾತ್ರವಲ್ಲದೆ ಸಮಾಜಕ್ಕೂ ಮಾರ್ಗದರ್ಶಕರಾಗಬೇಕೆಂದರು. ಮಾಣಿ ವಲಯ ಸಿಆರ್‍ಪಿ ಸತೀಶ್ ರಾವ್ ಉದ್ಘಾಟಿಸಿದರು. ಬಂಟ್ವಾಳ ಸಿಆರ್‍ಪಿ ನಂದ ಎಸ್ತೇರ ಶುಭ ಹಾರೈಸಿದರು.
ಕುದ್ರೆಬೆಟ್ಟು ಶಾಲೆಯ ಮುಖ್ಯ ಶಿಕ್ಷಕಿ ದೇವಿಕಾ ಸ್ವಾಗತಿಸಿದರು. ಮಮತಾ ಶೆಟ್ಟಿ ವಂದಿಸಿದರು. ಅಮಿತ ಕುದ್ರೆಬೆಟ್ಟು ನಿರೂಪಿಸಿದರು. ಶಿಕ್ಷಕರಾದ ಜಯರಾಮ ಪಡ್ರೆ, ಜಯಲಕ್ಷ್ಮೀ, ಅಮೋಘ ಅನಂತಾಡಿ, ಸಚಿನ್, ಅಭಿಪ್ರಾಯ ವ್ಯಕ್ತ ಪಡಿಸಿದರು. ಬಂಟ್ವಾಳ ನಗರ , ಬಾಳ್ತಿಲ , ಮಾಣಿ, ಕಡೇಶ್ವಾಲ್ಯ ವಲಯಗಳ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ತರಬೇತಿಯಲ್ಲಿ ಪಾಲ್ಗೊಂಡಿದ್ದರು.

image 3

image 2

Sponsors

Related Articles

Back to top button