ಕನ್ನಡಿಗರು ಇರುವ 11 ಗ್ರಾಮಗಳ ಹೆಸರು ಬದಲಿಸಿದ ಕೇರಳ ಸರ್ಕಾರ…

ಮಂಗಳೂರು: ಅತೀ ಹೆಚ್ಚು ಕನ್ನಡಿಗರನ್ನೇ ಹೊಂದಿರುವ ಗಡಿ ಜಿಲ್ಲೆಯಾದ ಕಾಸರಗೋಡಿನ ಕನ್ನಡ ಪ್ರಾಬಲ್ಯವಿರುವ 11 ಗ್ರಾಮಗಳ ಹೆಸರನ್ನು ಕೇರಳ ಸರ್ಕಾರ ಕನ್ನಡದಿಂದ ಮಲಯಾಳಂಗೆ ಭಾಷಾಂತರ ಮಾಡಿದೆ.
ಈ ಹಿಂದೆಯೂ ಗಡಿಭಾಗದ ಕನ್ನಡ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನೇ ಪ್ರಥಮ ಭಾಷೆಯಾಗಿ ಅಳವಡಿಸುವ ಆದೇಶ ನೀಡಿದ್ದ ಕೇರಳ ಸರ್ಕಾರ ಈಗ ಮತ್ತೆ ಗ್ರಾಮಗಳ ಹೆಸರನ್ನು ಬದಲಾಯಿಸುವ ಮೂಲಕ ಗಡಿಭಾಗದ ಕನ್ನಡಿಗರ ಭಾಷಾಭಿಮಾನದ ವಿರುದ್ಧ ಸವಾರಿ ಮಾಡಲು ಹೊರಟಿದೆ. ಈ ಬಗ್ಗೆ ಕೇರಳ ಸರ್ಕಾರಕ್ಕೆ ಪತ್ರ ಬರೆದಿರುವ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ್ ಗ್ರಾಮಗಳ ಹೆಸರನ್ನು ಬದಲಾವಣೆ ಮಾಡದಂತೆ ಒತ್ತಾಯಿಸಿದ್ದಾರೆ.
ಕೇರಳ ಸರ್ಕಾರ ಕಾಸರಗೋಡು ಜಿಲ್ಲೆಯ ಮಧೂರು ಎಂಬ ಗ್ರಾಮವನ್ನು ಮಧುರಂ, ಕಾರಡ್ಕವನ್ನು ಕಡಗಮ್, ಪಿಳಿಕುಂಜೆಯನ್ನು ಪಿಳಿಕುನ್ನು, ಮಂಜೇಶ್ವರವನ್ನು ಮಂಜೇಶ್ವರಂ, ಕುಂಬಳವನ್ನು ಕುಂಬ್ಳಾ, ನೆಲ್ಲಿಕುಂಜವನ್ನು ನೆಲ್ಲಿಕುನ್ನಿ, ಮಲ್ಲ ಅನ್ನು ಮಲ್ಲಂ, ಬೇದಡ್ಕವನ್ನು ಬೇಡಗಮ್, ಆನೆಬಾಗಿಲುವನ್ನು ಆನೆವಾಗಿಲ್, ಹೊಸದುರ್ಗವನ್ನು ಪುದಿಯಕೋಟ, ಸಸಹಿತ್ಲುವನ್ನು ಶೈವಲಖ್ ಎಂಬುವುದಾಗಿ ಬದಲಾಯಿಸಲು ತೀರ್ಮಾನ ಮಾಡಿದೆ.
ಹಲವು ಭಾಗದಲ್ಲಿ ಭಾಷಾಂತರಗೊಂಡ ಹೆಸರಿನ ಬೋರ್ಡ್ ಕೂಡಾ ಹಾಕಲಾಗಿದೆ ಎನ್ನಲಾಗಿದೆ.

Sponsors

Related Articles

Back to top button