ಸಿಎಎ ಯನ್ನು ವಿರೋಧಿಸುವುದು ಸಾಂವಿಧಾನಿಕ ಪ್ರಮಾದ – ರಕ್ಷಣಾ ಸಚಿವ ರಾಜನಾಥ್ ಸಿಂಗ್

ಮಂಗಳೂರು: ಸಿಎಎಯನ್ನು ವಿರೋಧಿಸುವುದು ಸಾಂವಿಧಾನಿಕ ಪ್ರಮಾದವಾಗಿದ್ದು ಸಿಎಎ ಕಾಯ್ದೆಯ ಕುರಿತಂತೆ ಕಾಂಗ್ರೆಸ್ ಗೊಂದಲದ ವಾತಾವರಣವನ್ನು ನಿರ್ಮಿಸಿದ್ದು, ಯಾವುದೇ ವಿಪಕ್ಷಗಳು ತಮ್ಮ ಪಕ್ಷ ಧರ್ಮವನ್ನು ನಿಭಾಯಿಸುವುದಕ್ಕಾಗಿ ರಾಷ್ಟ್ರ ಧರ್ಮವನ್ನು ಮರೆಯಬಾರದು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು
ನಗರದ ಕೂಳೂರಿನ ಗೋಲ್ಡ್ಪಿಂಚ್ ಮೈದಾನದಲ್ಲಿ ಇಂದು ಕೇಂದ್ರ ಸರಕಾರದ ಸಿಎಎ ಪರ ಜಾಗೃತಿ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು.
ಬಿಜೆಪಿ ಹೇಳಿದ್ದನ್ನು ಮಾಡಿ ತೋರಿಸಿದ ಪಕ್ಷ. ದೇಶದ ಜನರಿಗೆ ನಾವು ಕೊಟ್ಟಿರುವ ಭರವಸೆಯನ್ನು ಈಡೇರಿಸಿದ್ದೇವೆ. ಚುನಾವಣೆ ಪ್ರಣಾಳಿಕೆಯಲ್ಲಿ ನಾಗರಿಕತ್ವದ ಭರವಸೆ ನೀಡಿದ್ದೇವು. ಅದನ್ನು ನಾವು ಮಾಡಿದ್ಧೇವೆ. ಅಲ್ಲದೆ ಬಹು ಅಪೇಕ್ಷೆಯ ತ್ರಿವಳಿ ತಲಾಕ್ ನಿಷೇಧ ಮಾಡಲಾಗಿದೆ. ಇನ್ನು ರಾಮಮಂದಿರ ನಿರ್ಮಾಣಕ್ಕೆ ಸಂವಿಧಾನ ಪ್ರಕಾರವಾಗಿಯೇ ಕಾರ್ಯಗಳನ್ನು ಕೈಗೊಂಡಿದ್ದು, ಅದಕ್ಕೂ ಸುಪ್ರೀಂ ಕೋರ್ಟ್ ಸಮ್ಮತಿಸಿದೆ ಎಂದು ಹೇಳಿದರು. ಪೂರ್ಣ ಬಹುಮತ ಸಿಕ್ಕಿದ ಕಾರಣ 370ನೇ ವಿಧಿಯನ್ನು ರದ್ದು ಮಾಡಿದೆವು. ಕಾಶ್ಮೀರಿ ಪಂಡಿತರು ನಮ್ಮದೇ ನೆಲದಲ್ಲಿ ನಿರಾಶ್ರಿತರಂತೆ ಬದುಕುತ್ತಿದ್ದಾರೆ. ಯಾಕಾಗಿ ನಿರಾಶ್ರಿತರಂತೆ ಜೀವನ ನಡೆಸಬೇಕು ಎಂದು ರಾಜನಾಥ್ ಸಿಂಗ್ ಪ್ರಶ್ನಿಸಿದರು.
ಈ ದೇಶದ ಯಾವುದೇ ಒಬ್ಬ ನಾಗರಿಕನಿಗೆ ಸಿಎಎ ಕಾಯಿದೆಯಿಂದ ಪರಿಣಾಮ ಬೀರುವುದಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) 1955 ರ ತಿದ್ದುಪಡಿ ಮಾಡಿದ ಪೌರತ್ವ ಕಾಯ್ದೆಯಾಗಿದ್ದು, ಹಿಂದೂ, ಸಿಖ್, ಜೈನ್, ಬೌದ್ಧ, ಪಾರ್ಸಿ ಮತ್ತು ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಕ್ರಿಶ್ಚಿಯನ್ ಸಮುದಾಯಗಳಿಗೆ ಸೇರಿದ ಅಕ್ರಮ ವಲಸಿಗರು ತೊರೆದರೆ ಭಾರತೀಯ ಪೌರತ್ವವನ್ನು ಪಡೆದುಕೊಳ್ಳುವುದು ಸುಲಭವಾಗುತ್ತದೆ. ಧಾರ್ಮಿಕ ಕಿರುಕುಳದಿಂದ ಪಾರಾಗಲು ಅವರ ಮೂಲ ದೇಶಗಳು. ಪೌರತ್ವ ತಿದ್ದುಪಡಿ ಮಸೂದೆಯನ್ನು (ಸಿಎಬಿ) ನಮ್ಮ ಸರ್ಕಾರವು 2016 ರಲ್ಲಿ ರಚಿಸಿ 2019 ರ ಜನವರಿಯಲ್ಲಿ ಲೋಕಸಭೆಯಲ್ಲಿ ಅಂಗೀಕರಿಸಿತು, ಈಗ ಹೊಸ ಸಿಎಬಿ ಅನ್ನು ಸಂಸತ್ತಿನ ಉಭಯ ಸದನಗಳಲ್ಲಿಯೂ 2019 ರ ಡಿಸೆಂಬರ್ನಲ್ಲಿ ಅಂಗೀಕರಿಸಲಾಗಿದೆ. ಬಿಜೆಪಿ ಇರುವ ಕೆಲವು ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದಾಗ, ಪ್ರತಿಪಕ್ಷಗಳು ಸಿಎಎ ವಿರುದ್ಧ ಪ್ರತಿಭಟಿಸಿದವು. ಸಿಎಎ ಮೂಲಕ ಈ ದೇಶದಲ್ಲಿ ಯಾರೂ ತೊಂದರೆ ಅನುಭವಿಸುವುದಿಲ್ಲ ಮತ್ತು ಈ ದೇಶದ ಯಾವುದೇ ಮುಸ್ಲಿಂ ಸಮಸ್ಯೆಗಳನ್ನು ಎದುರಿಸಿದರೆ, ಬಿಜೆಪಿ ಅವರೊಂದಿಗೆ ನಿಲ್ಲುತ್ತದೆ.
ಇಲ್ಲಿ ಸೇರಿರುವವರು ಮುಸಲ್ಮಾನರು ಸೇರಿದಂತೆ ಮತ ಧರ್ಮಗಳ ಬೇಧವಿಲ್ಲದೆ, ಈ ಕಾನೂನಿನ ಬಗ್ಗೆ ಜನಸಾಮಾನ್ಯರಿಗೆ ಅರ್ಥ ಮಾಡಿಸುವ ಕೆಲಸ ಮಾಡಬೇಕು ಎಂದು ಕರೆ ನೀಡಿದ ಕೇಂದ್ರ ಸಚಿವ ರಾಜನಾಥ್ ಸಿಂಗ್, ಪ್ರಧಾನಿ ನರೇಂದ್ರ ಮೋದಿಯವರು ಹೇಳಿದಂತೆ ಎನ್ಆರ್ಸಿ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಹಾಗಿದ್ದರೂ ಮುಸ್ಲಿಂ ಸಮುದಾಯದಲ್ಲಿ ಭಯ ಹುಟ್ಟಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.
ಕೇಂದ್ರ ಸಚಿವ ಸದಾನಂದ ಗೌಡ, ಸಂಸದರಾದ ನಳಿನ್ ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button