ಬಹು ನಿರೀಕ್ಷಿತ ಸುಳ್ಯ-ನಾಗಪಟ್ಟಣ ಕಾಂಕ್ರೀಟ್ ರಸ್ತೆಗೆ ಇಂದು ಶಿಲಾನ್ಯಾಸ…

ಸುಳ್ಯ: ಸುಳ್ಯ ನಗರದಿಂದ ಆಲೆಟ್ಟಿ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಗುರಂಪು ನಿಂದ ನಾಗಪಟ್ಟಣ ಸೇತುವೆ ವರೆಗೆ ಕೆಲವು ವರ್ಷಗಳಿಂದ ರಸ್ತೆ ಹದಗೆಟ್ಟು ವಾಹನ ಸವಾರರಿಗೆ ತೊಂದರೆಯಾಗುತ್ತಿತ್ತು. ಈ ರಸ್ತೆಗೆ ಇಂದು ಬೆಳಗ್ಗೆ 11 ಗಂಟೆಗೆ ಸುಳ್ಯ ಶಾಸಕ ಎಸ್. ಅಂಗಾರ ಗುದ್ದಲಿಪೂಜೆ ನೆರವೇರಿಸಲಿದ್ದಾರೆ. ಹಾಗೂ ಕಾಮಗಾರಿ ಆರಂಭಗೊಳ್ಳಲಿದೆ.
ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಜಿ.ಪಂ. ಸದಸ್ಯ ಹರೀಶ್ ಕಂಜಿಪಿಲಿ, ತಹಶೀಲ್ದಾರ್ ಅನಂತ ಶಂಕರ, ನ.ಪಂ. ಮುಖ್ಯಾಧಿಕಾರಿ ಮತ್ತಡಿ, ಸಿ.ಎ.ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ ಮತ್ತಿತರರು ಭಾಗವಹಿಸಲಿದ್ದಾರೆಂದು ಸ್ಥಳೀಯ ನ.ಪಂ. ಸದಸ್ಯೆ ಸುಶೀಲ ಜಿನ್ನಪ್ಪ ಪೂಜಾರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button