ಜನವಿರೋಧಿ ಮತ್ತು ಅಭಿವೃದ್ಧಿ ವಿರೋಧಿ ಬಜೆಟ್ – ಟಿ.ಎಂ.ಶಹೀದ್ ತೆಕ್ಕಿಲ್ ಟೀಕೆ…

ಸುಳ್ಯ: ಕನಾಟಕ ಸರಕಾರದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿಧಾನಸೌಧದಲ್ಲಿ ಮಂಡಿಸಿದ ಬಜೆಟ್ ಯಾವುದೇ ಚಿಂತನೆ ಇಲ್ಲದ, ಸಂಘ ಪರಿವಾರದ ಕಪಿಮುಷ್ಠಿಯಲ್ಲಿ ಮಂಡಿಸಿದ ಜನವಿರೋಧಿ ಮತ್ತು ಅಭಿವೃದ್ಧಿ ವಿರೋಧಿ ಬಜೆಟ್ ಆಗಿದೆ ಎಂದು ಕೆಪಿಸಿಸಿ ಯ ಮಾಜಿ ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್ ಟೀಕಿಸಿದ್ದಾರೆ.
ರಾಜ್ಯದಲ್ಲಿ ಶೇ.15 ರಷ್ಟು ಸಮುದಾಯವನ್ನು ಹೊಂದಿರುವ ಅಲ್ಪಸಂಖ್ಯಾತರಿಗೆ ಬಜೆಟ್ ನಲ್ಲಿ ಯಾವುದೇ ಯೋಜನೆ ಇಲ್ಲ. ಯುವಕ-ಯುವತಿಯರಿಗಾಗಿ ಹೊಸ ಉದ್ಯೋಗವನ್ನು ಸೃಷ್ಠಿಸುವ ಯೋಜನೆಗಳ ಪ್ರಸ್ತಾಪವಿರುವುದಿಲ್ಲ. ದ.ಕ. ಜಿಲ್ಲೆಗೆ ಯಾವುದೇ ವಿಶೇಷ ಪ್ಯಾಕೇಜ್ ಆಗಲಿ, ಅನುದಾನವಾಗಲಿ ಬಜೆಟ್‌ನಲ್ಲಿ ತೋರಿಸಿರುವುದಿಲ್ಲ. ಒಟ್ಟಿನಲ್ಲಿ ಇದು ಜನವಿರೋಧಿ ಬಜೆಟ್ ಎಂದು ಟಿ.ಎಂ.ಶಹೀದ್ ತೆಕ್ಕಿಲ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Sponsors

Related Articles

Back to top button