ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ಭುವನ್‍ರಾಮ್ ಅವರಿಗೆ ವೈಟ್‍ ಲಿಫ್ಟಿಂಗ್ ನಲ್ಲಿ ಕಂಚಿನ ಪದಕ…

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿ ಭುವನ್‍ರಾಮ್ ಜಗದೀಶ್ ಭಂಡಾರಿ ಇವರು ರಾಜ್ಯ ಮಟ್ಟದ ಜೂನಿಯರ್ ವೈಟ್‍ ಲಿಫ್ಟಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಕಂಚಿನ ಪದಕವನ್ನು ಗಳಿಸಿಕೊಂಡಿದ್ದಾರೆ.
ಕರ್ನಾಟಕ ರಾಜ್ಯ ವೈಟ್‍ ಲಿಫ್ಟಿಂಗ್ ಅಸೋಸಿಯೇಶನ್‍ನ ಆಶ್ರಯದಲ್ಲಿ ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ಪ್ರಥಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಭುವನ್‍ರಾಮ್ 67ಕೆಜಿ ವಿಭಾಗದಲ್ಲಿ ಈ ಸಾಧನೆಯನ್ನು ಮಾಡಿದ್ದಾರೆ.
ಇವರು ಪುತ್ತೂರಿನ ಜಗದೀಶ್ ಭಂಡಾರಿ ಹಾಗೂ ನಯನಾ ಭಂಡಾರಿ ಇವರ ಪುತ್ರ.
ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರ ಮಾರ್ಗದರ್ಶನದಲ್ಲಿ ಭಾರತೀಯ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನ ವಿಶ್ರಾಂತ ಯೋಧ ಹಾಗೂ ರಾಷ್ಟ್ರೀಯ ವೈಟ್‍ಲಿಫ್ಟರ್ ಪುಷ್ಪರಾಜ್ ಭಾರ್ತಿಕುಮೇರು ತರಬೇತಿಯನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.

Sponsors

Related Articles

Back to top button