ಕಾಸರಗೋಡು ಸಂಸದ ರಾಜ್ ಮೋಹನ್ ಉನ್ನಿತ್ತಾನ್ ಭೇಟಿ…

ಕಾಸರಗೋಡು: ರಷ್ಯ ಯುದ್ಧದಿಂದ ತತ್ತರಿಸಿರುವ ಉಕ್ರೇನ್ ನಲ್ಲಿ ಎಂ ಬಿ ಬಿ ಎಸ್ ವ್ಯಾಸಂಗ ಮಾಡುತ್ತಿರುವ ಕಾಸರಗೋಡು ಜಿಲ್ಲೆಯ ಪಡನ ನಿವಾಸಿ ಎಂ ಬಿ ಖದೀಜ ರವರ ಮನೆಗೆ ಕಾಸರಗೋಡು ಸಂಸದ ರಾಜ್ ಮೋಹನ್ ಉನ್ನಿತ್ತಾನ್ ಭೇಟಿ ಕೊಟ್ಟು ಕುಟುಂಬಸ್ಥರಿಗೆ ದೈರ್ಯ ತುಂಬಿದರು.
ಈ ಸಂದರ್ಭದಲ್ಲಿ ತೆಕ್ಕಿಲ್ ಪ್ರತಿಸ್ಥಾನದ ಅಧ್ಯಕ್ಷರಾದ ಟಿ ಎಂ ಶಾಹೀದ್ ತೆಕ್ಕಿಲ್, ಕಾಸರಗೋಡು ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾದ ಎ ಎ ಫೈಸಲ್, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ ಕೆ ಹಮೀದ್ ಗೂನಡ್ಕ, ಪಡನ ಪಂಚಾಯತ್ ಅಧ್ಯಕ್ಷರಾದ ಅಸ್ಲಂ ಪಡನ, ಸಿದ್ದೀಕ್ ಕೋಕೋ, ರಹೀಂ ಬೀಜದಕಟ್ಟೆ ಉಪಸ್ಥಿತರಿದ್ದರು. ಸಂಸದರು ಸರಕಾರದ ಸಂಪೂರ್ಣ ಸಹಕಾರದ ಭರವಸೆ ನೀಡಿದರು.

Sponsors

Related Articles

Back to top button