ನೆರೆ ಸಂತ್ರಸ್ತರಿಗೆ ಪರಿಹಾರ: ಗೃಹ ಸಚಿವ ಬೊಮ್ಮಾಯಿ….

ಮಂಗಳೂರು: ನೆರೆಯಿಂದಾಗಿ ಸುಮಾರು 5 ಸಾವಿರ ಮನೆಗಳಿಗೆ ಹಾನಿಯಾಗಿದ್ದು, ಎ ಮತ್ತು ಬಿ ಕೆಟಗರಿಯಲ್ಲಿ ಪರಿಹಾರ ನೀಡಲಿದ್ದೇವೆ. ಪೂರ್ತಿ ಮನೆ ನಾಶವಾದ ಸಂತ್ರಸ್ತರಿಗೆ 5 ಲಕ್ಷ ಪರಿಹಾರ, ಭಾಗಶಃ ಹಾನಿಯಾದವರಿಗೆ 50 ಸಾವಿರ ರೂ. ಪರಿಹಾರ ಧನ ನೀಡಲಿದ್ದೇವೆ. ರಾಜ್ಯದ 12 ಜಿಲ್ಲೆಗಳಲ್ಲಿ ಬೆಳೆ ಹಾನಿಯಾಗಿದೆ. ಎಲ್ಲರಿಗೂ ಪರಿಹಾರ ನೀಡಲಿದ್ದೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಅ. 24 ರಂದು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ನೆರೆ ಬಾಧಿತ ಜಿಲ್ಲೆಗಳ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಈ ಹಿಂದೆ ನೀಡಿದ ಮಾದರಿಯಲ್ಲೇ ಪರಿಹಾರ ಸೂಚಿಸಲು ನಿರ್ಧರಿಸಲಾಗಿದೆ ಎಂದರು.
ಹುಬ್ಬಳ್ಳಿ ರೈಲು ನಿಲ್ದಾಣ ದಲ್ಲಿ ಸ್ಪೋಟ ಪ್ರಕರಣ, ಅಮರಾವತಿ ಎಕ್ಸ್ ಪ್ರೆಸ್ ನಲ್ಲಿ ಪತ್ತೆಯಾದ ನಿಂಬೆ ಹಣ್ಣಿನ ಮಾದರಿಯಲ್ಲಿ ಸ್ಪೋಟಕ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶ ಮತ್ತು ಮಹಾರಾಷ್ಟ್ರ ಪೊಲೀಸ್ ಸಂಪರ್ಕ ಹೊಂದಿದ್ದೇವೆ. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಪ್ರಕರಣದಲ್ಲಿ ಉಗ್ರ ಸಂಘಟನೆಗಳ ಕೈವಾಡದ ಬಗ್ಗೆ ತನಿಖೆ ನಂತರ ಗೊತ್ತಾಗಲಿದೆ ಎಂದೂ ಅವರು ತಿಳಿಸಿದರು.

Sponsors

Related Articles

Leave a Reply

Your email address will not be published. Required fields are marked *

Back to top button