ನೆಲ್ಲೂರು ಕೆಮ್ರಾಜೆ ಸೊಸೈಟಿ ಅಧ್ಯಕ್ಷತೆಗೆ ಚುನಾವಣೆ : ವಿಷ್ಣು ಭಟ್ ಮೂಲೆತೋಟ ಗೆಲುವು…..

ಸುಳ್ಯ : ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿಷ್ಣು ಭಟ್ ಮೂಲೆತೋಟ ಅವರು ಗೆಲುವು ಸಾಧಿಸಿದ್ದಾರೆ.
ಡಿಸಿಸಿ ಬ್ಯಾಂಕ್ ಚುನಾವಣೆ ಬಳಿಕ ನಡೆದ ಬೆಳವಣಿಗೆಯಲ್ಲಿ ತಾಲೂಕಿನಿಂದ ಮತದಾನ ಮಾಡಿದ ಎಲ್ಲಾ 17 ಮಂದಿ ರಾಜೀನಾಮೆ ನೀಡುವಂತೆ ಬಿಜೆಪಿ ಹಾಗೂ ಸಂಘಪರಿವಾರ ಸೂಚನೆ ನೀಡಿತ್ತು. ನೆಲ್ಲೂರು ಕೆಮ್ರಾಜೆಯಲ್ಲಿ ಪಕ್ಷದ ಹಾಗೂ ಸಂಘಪರಿವಾರದ ಸೂಚನೆ ಮೇರೆಗೆ ಅಧ್ಯಕ್ಷರಾಗಿದ್ದ ವಿಷ್ಣು ಭಟ್ ರಾಜೀನಾಮೆ ನೀಡಿದ್ದರು. ಹೀಗಾಗಿ ತೆರವಾಗಿದ್ದ ಈ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಿಗದಿಯಾಗಿತ್ತು. ಇಂದು ನಡೆದ ಚುನಾವಣೆಯಲ್ಲಿ ಸಹಕಾರಿ ಸಂಘದ ನಿರ್ದೇಶಕರುಗಳಾದ ವಿಷ್ಣು ಭಟ್ ಹಾಗೂ ಪಕ್ಷದ ಅಧಿಕೃತ ಅಭ್ಯರ್ಥಿ ಸವಿನ್ ಕೊಡಪ್ಪಾಲ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದರು. ಹೀಗಾಗಿ ಚುನಾವಣೆ ನಡೆಯಿತು. ವಿಷ್ಣು ಭಟ್ ಅವರ ಪರ 6 ಮತಗಳು ಹಾಗೂ ಸವಿನ್ ಕೊಡಪ್ಪಾಲ ಪರ 4 ಮತಗಳು ಬಂದವು.

Sponsors

Related Articles

Leave a Reply

Your email address will not be published. Required fields are marked *

Back to top button