ಶಿವರಾಮ ಕಾರಂತ ರಾಜ್ಯ ಪ್ರಶಸ್ತಿಗೆ ಸಾಹಿತಿ ಜಯಾನಂದ ಪೆರಾಜೆ ಆಯ್ಕೆ…

ಬಂಟ್ವಾಳ: ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ನೀಡುವ ಸಾಹಿತ್ಯ ಶ್ರೇಷ್ಠ ಕೋಟ ಶಿವರಾಮ ಕಾರಂತ ರಾಜ್ಯ ಪ್ರಶಸ್ತಿಗೆ ಹಿರಿಯ ಪತ್ರಕರ್ತ, ಸಾಹಿತಿ ಜಯಾನಂದ ಪೆರಾಜೆ ಯವರು ಆಯ್ಕೆಯಾಗಿದ್ದಾರೆ ಎಂದು ಬರಹಗಾರರ ಸಂಘದ ರಾಜ್ಯಾಧ್ಯಕ್ಷ ಮಧುನಾಯ್ಕ ಲಂಬಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತ್ ಭವನ ಹಾಸನದಲ್ಲಿ ಫೆ.27 ರಂದು ನಡೆಯುವ ಕನ್ನಡ ನುಡಿ ವೈಭವ – 2022 ರಾಜ್ಯ ಸಮ್ಮೇಳನದಲ್ಲಿ ಕ.ಸಾ.ಪ ರಾಜ್ಯಾಧ್ಯಕ್ಷ ನಾಡೋಜ ಮಹೇಶ್ ಜೋಶಿಯವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕನ್ನಡ ಭಾಷಾ ಶಿಕ್ಷಕರಾಗಿ ,ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದಿರುತ್ತಾರೆ.ಶಿಕ್ಷಣ ಸಂಪನ್ಮೂಲ ವ್ಯಕ್ತಿಯಾಗಿ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾಗಿದ್ದಾರೆ. ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಬಂಟ್ವಾಳ ತಾಲೂಕು ವರದಿಗಾರರಾಗಿ ಗುರುತಿಸಲ್ಪಟ್ಟಿದ್ದಾರೆ. ಪ್ರಸ್ತುತ ಹೊಸದಿಗಂತ ದಿನಪತ್ರಿಕೆಯ ವರದಿಗಾರಾಗಿರುತ್ತಾರೆ. ನಾಟಕಗಳಲ್ಲಿ ನಟನಾಗಿ ನಿರ್ದೇಶಕನಾಗಿ ಗುರುತಿಸಲ್ಪಟ್ಟಿದ್ದಾರೆ. ಯಕ್ಷಗಾನ ಕಲಾವಿದರಾಗಿ ವಿವಿಧ ಸಾಂಸ್ಕøತಿಕ ಚಟುವಟಿಕೆಗಳಲ್ಲಿ ನಿರಂತರ ತೊಡಗಿಸಿಕೊಂದ್ದಾರೆ. ಜೆ.ಸಿ.ಐ ಸಂಸ್ಥೆಯಲ್ಲಿ ವಲಯಾಧಿಕಾರಿಯಾಗಿ ರಾಜ್ಯ ತರಬೇತುದಾರರಾಗಿ ಮನ್ನಣೆ ಪಡೆದಿದ್ದಾರೆ. ಭಾವಬಿಂದು ಕವನ ಸಂಕಲನ ಪ್ರಕಟಿಸಿದ್ದು, ಕವಿ ಸಾಹಿತಿಯಾಗಿ ಹಲವು ಕೃತಿಗಳ ಸಂಪಾದನೆ ಮಾಡಿದ್ದಾರೆ. ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Sponsors

Related Articles

Back to top button