ಮಂಡ್ಯ- ಅರ್ಕೇಶ್ವರ ಸ್ವಾಮೀ ದೇವಸ್ಥಾನದ ಅರ್ಚಕರ ಕೊಲೆ, ಹುಂಡಿ ಹಣ ದರೋಡೆ….

ಮಂಡ್ಯ : ಮೂವರು ಅರ್ಚಕರನ್ನು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ ದುಷ್ಕರ್ಮಿಗಳು ದೇವಾಲಯದ ಹುಂಡಿಯಲ್ಲಿದ್ದ ಹಣವನ್ನು ದೋಚಿರುವ ಘಟನೆ ನಗರದ ಗುತ್ತಲಿನಲ್ಲಿರುವ ಅರ್ಕೇಶ್ವರ ದೇವಾಲಯದಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ಗಣೇಶ, ಪ್ರಕಾಶ, ಆನಂದ ಕೊಲೆಯಾದವರು. ಇದರಲ್ಲಿ ಇಬ್ಬರು ಅರ್ಚಕರು, ಒಬ್ಬ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು.ಹುಂಡಿಯ ಹಣವನ್ನು ದೋಚಿರುವ ಕಳ್ಳರು, ಹುಂಡಿಯಲ್ಲಿನ ನೋಟುಗಳನ್ನು ಮಾತ್ರ ತೆಗೆದುಕೊಂಡು ಚಿಲ್ಲರೆ ಇರುವ ಹುಂಡಿಯನ್ನು ಆವರಣದಲ್ಲಿ ಎಸೆದು ಹೋಗಿದ್ದಾರೆ. ಮಂಡ್ಯ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sponsors

Related Articles

Leave a Reply

Your email address will not be published. Required fields are marked *

Back to top button