ಸರಕಾರಿ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ…..

ಬಂಟ್ವಾಳ: ಇರಾ ಸೋಮನಾಥೇಶ್ವರ ದೇವಸ್ಥಾನ ಕುಂಡಾವು ಇಲ್ಲಿನ ವಾರ್ಷಿಕ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಸರಕಾರಿ ಪ್ರೌಢ ಶಾಲೆ ಮತ್ತು ಪ್ರಾಥಮಿಕ ಶಾಲೆಯ ಗ್ರಂಥಾಲಯಗಳಿಗೆ ತಲಾ ಹತ್ತು ಸಾವಿರ ಬೆಲೆ ಬಾಳುವ ಪುಸ್ತಕವನ್ನು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ನೀಡಿದರು.
ಅವರು ಮಾತನಾಡಿ ಜಿಲ್ಲೆಯ ಶಾಲೆಗಳ ಗ್ರಂಥಾಲಯಗಳಿಗೆ ಪುಸ್ತಕವನ್ನು ಉಚಿತವಾಗಿ ನೀಡುತ್ತಿರುವುದಾಗಿ ಹಾಗೂ ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ತಿಳಿಸಿದರು. ಚುಟುಕು ಸಾಹಿತ್ಯ ಪರಿಷತ್ತಿನ ಕಡಬ ವಲಯ ಉಪಾಧ್ಯಕ್ಷೆ ,ಶಿಕ್ಷಕಿ ಶಾಂತಾ ಪುತ್ತೂರು ಮತ್ತು ಇರಾಗ್ರಾಮದ ನಡುಕೆಂಜಿಲ ದ.ಕ.ಜಿ.ಪ ಹಿರಿಯಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಹರೀಶ ಪುಸ್ತಕವನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಅಖಿಲ ಭಾರತ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಇರಾ ನೇಮು ಪೂಜಾರಿ, ಜಿಲ್ಲಾ ಚುಟಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ತಾರನಾಥ ಬೋಳಾರ,ರಾಜಾರಾಮ ವರ್ಮ , ಹರೀಶ ಸುಲಾಯ ಒಡ್ಡಂಬೆಟ್ಟು , ಗ್ರಾ.ಪಂ ಅಧ್ಯಕ್ಷ ರಝಾಕ್ ಕುಕ್ಕಾಜೆ, ಜಗದೀಶ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು

Sponsors

Related Articles

Leave a Reply

Your email address will not be published. Required fields are marked *

Back to top button