ಅನ್ನಪಾಡಿ ಶ್ರೀ ಬಾಲಗಣಪತಿ ದೇವಸ್ಥಾನ – ಕಾಂಕ್ರೀಟ್ ರಸ್ತೆಗೆ ಶಿಲಾನ್ಯಾಸ…

ಬಂಟ್ವಾಳ :ಸಜಿಪಮೂಡ ಗ್ರಾಮದ ಅನ್ನಪಾಡಿ ಶ್ರೀ ಬಾಲಗಣಪತಿ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ನೂತನ ಕಾಂಕ್ರೀಟ್ ರಸ್ತೆಗೆ ಶಿಲಾನ್ಯಾಸವನ್ನು ಇಂದು(ಏ.22) ನೆರವೇರಿಸಲಾಯಿತು.
ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಇವರು ಸರಕಾರದಿಂದ ಈ ಕಾಮಗಾರಿಗೆ ಅಂದಾಜು 20 ಲಕ್ಷ ರೂಪಾಯಿ ಮಂಜೂರು ಮಾಡಿರುತ್ತಾರೆ. ಭೂಮಿ ಪೂಜೆಯ ಧಾರ್ಮಿಕ ವಿಧಿವಿಧಾನಗಳನ್ನು ಸಜೀಪ ಮಾಗಣೆಯ ತಂತ್ರಿ ಎಂ ಸುಬ್ರಮಣ್ಯ ಭಟ್ ವಿದ್ಯುಕ್ತವಾಗಿ ನೆರವೇರಿಸಿದರು.
ಶಿಲಾನ್ಯಾಸವನ್ನು ಜಿಲ್ಲಾ ಪಂಚಾಯತ್ ಸದಸ್ಯ ಕೆ ರವೀಂದ್ರ ಕಂಬಳಿ ನೆರವೇರಿಸಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಯಶವಂತ ದೇರಾಜೆ, ನಂದಾವರ ಕ್ಷೇತ್ರ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅರವಿಂದ ಭಟ್, ಶ್ರೀಕಾಂತ್ ಶೆಟ್ಟಿ ಸಂಕೇಶ, ಸಜಿಪಮೂಡ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ದೇವಿಪ್ರಸಾದ್ ಪೂಂಜಾ ಹಾಗೂ ಕೆ ವಿಶ್ವನಾಥ್ ಬೆಲ್ಚಡ, ಸುರೇಶ್ ಪೂಜಾರಿ ಸರ್ತಾವು, ಲಿoಗಪ್ಪ ದೋಟ, ರಮೇಶ್, ಕೂಸೇಶ್, ನಿತಿನ್ ಆರಸ, ವಿಶ್ವನಾಥ್ ಕೊಟ್ಟಾರಿ, ರತ್ನಾಕರ ನಾಡಾರ ಮೊದಲಾದವರು ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button