ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿದರೆ 1 ಲಕ್ಷ ರೂ. ಬಹುಮಾನ – ಪ್ರತಿಭಾ ಕುಳಾಯಿ ಘೋಷಣೆ…

ಮಂಗಳೂರು: ಬಿಲ್ಲವರ ಆರಾಧ್ಯ ದೈವ ಕೋಟಿ ಚೆನ್ನಯರ ಬಗ್ಗೆ ಹಾಗೂ ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ವಿರುದ್ಧ ಕೀಳಾಗಿ ಮಾತಾಡಿರುವ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ರೂ. ಬಹುಮಾನ ನೀಡುತ್ತೇನೆಂದು ಕಾಂಗ್ರೆಸ್ ನ ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ಘೋಷಿಸಿದ್ದಾರೆ.
ಜಗದೀಶ್ ಅಧಿಕಾರಿ ಅವರು ಜನಾರ್ಧನ ಪೂಜಾರಿಯವರ ಕಾಲಿಗೆ ಬಿದ್ದು ಕ್ಷಮೆ ಕೇಳಬೇಕೆಂದು ಪ್ರತಿಭಾ ಕುಳಾಯಿ ಒತ್ತಾಯಿಸಿದ್ದಾರೆ. ಅಲ್ಲದೆ ಜಗದೀಶ್ ಅಧಿಕಾರಿ ಅವರ ಮುಖಕ್ಕೆ ಮಸಿ ಬಳಿದ ಬಿಲ್ಲವ ಸಮುದಾಯದ ವ್ಯಕ್ತಿಗೆ ಒಂದು ಲಕ್ಷ ಬಹುಮಾನ ನೀಡುವುದಾಗಿ ಹೇಳಿದ್ದಾರೆ. ಈ ಸಂಬಂಧ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಾಕಿರುವ ವಿಡಿಯೋ ವೈರಲ್ ಆಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರೂ ಆಗಿರುವ ಜಗದೀಶ್ ಅಧಿಕಾರಿ ಬಿಲ್ಲವರ ಬಗ್ಗೆ ಕೀಳಾಗಿ ಮಾತನಾಡಿರುವುದು ಬಿಲ್ಲವ ಸಮುದಾಯದವರ ಆಕ್ರೋಶಕ್ಕೆ ಕಾರಣವಾಗಿದೆ.

https://m.facebook.com/story.php?story_fbid=1034597280360353&id=100014302719167

Sponsors

Related Articles

Leave a Reply

Your email address will not be published. Required fields are marked *

Back to top button