ಕೊಡಗು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾಗಿ ನಾಗೇಶ್ ಕುಂದಲ್ಪಾಡಿ…

ಮಡಿಕೇರಿ: ಕೊಡಗು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ರಾಗಿ ನಾಗೇಶ್ ಕುಂದಲ್ಪಾಡಿ ಆಯ್ಕೆಯಾಗಿದ್ದಾರೆ.
ಇವರು ಹಾಲಿ ಮಡಿಕೇರಿ ತಾಲೂಕು ಪಂಚಾಯತ್ ಸದಸ್ಯರಾಗಿ, ಪೆರಾಜೆ ಪಯಸ್ವಿನಿ ಸೊಸೈಟಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕಾಲೇಜು ದಿನಗಳಿಂದಲೇ ಎ.ಬಿ.ವಿ .ಪಿ ಯ ಮಂಗಳೂರು ವಿಶ್ವವಿದ್ಯಾನಿಲಯದ ಕಾರ್ಯದರ್ಶಿಯಾಗಿ , ಪೆರಾಜೆ ಗ್ರಾಮ ಪಂಚಾಯತ್ ಸದಸ್ಯರಾಗಿ ,ಬಳಿಕ ಅಧ್ಯಕ್ಷರಾಗಿ ,ತಾಲೂಕು ಪಂಚಾಯತ್ ಅಧ್ಯಕ್ಷರಾಗಿ,ಆರೋಗ್ಯ ಮತ್ತು ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ,ಹಾಲಿ ಸದಸ್ಯರಾಗಿ ,ಕೊಡಗು ಜಿಲ್ಲಾ ಹಾಪ್ ಕಾಮ್ಸ್ ನಿರ್ದೇಶಕರಾಗಿ ,ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರಾಗಿ , ರ್ ಬೆಟ್ಟದಪುರ ಶ್ರೀ ದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ,ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಸಂಪಾಜೆ ಇದರ ನಿರ್ದೇಶಕರಾಗಿ , ಪ್ರಸ್ತುತ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪ್ರಥಮ ಅಧ್ಯಕ್ಷರಾಗಿಯೂ, ಪೆರಾಜೆ ಯುವಶಕ್ತಿ ಕ್ರೀಡಾ ಮತ್ತು ಕಲಾ ಹವ್ಯಾಸಿ ಸಂಘದ ಬೆಳ್ಳಿ ಹಬ್ಬ ಆಚರಣೆ ಸಮಿತಿಯ ಗೌರವ ಅಧ್ಯಕ್ಷರಾಗಿ, ಪೆರಾಜೆ ಜ್ಯೋತಿ ವಿದ್ಯಾ ಸಂಘದ ಕಾರ್ಯದರ್ಶಿಯಾಗಿ ಸಾಮಾಜಿಕ , ರಾಜಕೀಯ,ಸಹಕಾರಿ ಹೀಗೇ ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button