ಬೆಂಜನಪದವಿನ ಅಕ್ರಮ ಕಳ್ಳಭಟ್ಟಿ ಸಾರಾಯಿ ಅಡ್ಡೆಗೆ ದಾಳಿ…

ಮಂಗಳೂರು: ಬಂಟ್ವಾಳದ ಅಮ್ಮುಂಜೆ ಗ್ರಾಮದಲ್ಲಿ ಅಕ್ರಮವಾಗಿ ತಯಾರಿಸಲಾಗುತ್ತಿದ್ದ ಬೆಲ್ಲದ ಕೊಳೆ ಮತ್ತು ಕಳ್ಳಭಟ್ಟಿ ತಯಾರಿಸುವ ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಇಬ್ಬರನ್ನು ದಸ್ತಗಿರಿ ಮಾಡಲಾಗಿದೆ.
ಬೆಂಜನಪದವುನಲ್ಲಿ ಕ್ರಿಸ್ಟನ್ ಡಿಸೋಜ ಅವರ ಮನೆಯ ಹಿಂಭಾಗದಲ್ಲಿ ಈ ಧಂದೆ ನಡೆಯುತ್ತಿತ್ತು. ಮಾಹಿತಿಯ ಆಧಾರದ ಮೇಲೆ ಅಬಕಾರಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ಕಳ್ಳಭಟ್ಟಿ ತಯಾರಿ ಸಾಮಾಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಸ್ಥಳದಲ್ಲಿದ್ದ 1200 ಲೀ. ಬೆಲ್ಲದ ಕೊಳೆ ಮತ್ತು ಕಳ್ಳಭಟ್ಟಿ ತಯಾರಿಸುವ ಸಾಮಗ್ರಿ, 940 ಕೆಜಿ ಬೆಲ್ಲ, 500 ಲೀ. ನಕಲಿ ವೈನ್, 300 ಲೀ. ಬಟಾಟೆ ಮಿಶ್ರಣದ ಬೆಲ್ಲದ ಕೊಳೆಯನ್ನು ಜಫ್ತಿ ಮಾಡಿದ್ದಾರೆ.
ಆರೋಪಿಗಳಾದ ಕಿರಣ್ ಕುಮಾರ್ ಮತ್ತು ಕ್ರಿಸ್ಟನ್ ಡಿಸೋಜ ರವರನ್ನು ದಸ್ತಗಿರಿ ಮಾಡಲಾಗಿದೆ.

Sponsors

Related Articles

Leave a Reply

Your email address will not be published. Required fields are marked *

Back to top button