ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಜಲ್ ಪಾದೆ – ಬ್ರಹ್ಮಕಲಶೋತ್ಸವ ಸಿದ್ಧತಾ ಸಭೆ…

ಬಂಟ್ವಾಳ: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಜಲ್ ಪಾದೆ ಸಜೀಪಮುನ್ನೂರು ಇದರ ಬ್ರಹ್ಮಕಲಶೋತ್ಸವ ದಶಂಬರ 16 -19 ತಾರೀಕಿಗೆ ಬ್ರಹ್ಮಶ್ರೀ ನೀಲೇಶ್ವರ ಕೆ ಉಚ್ಚಿಲತ್ತಾಯ, ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜರಗಲಿದ್ದು, ಇದರ ಪೂರ್ವಭಾವಿ ಸಿದ್ಧತಾ ಸಭೆ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಂ ಕೃಷ್ಣ ಶಾಮ್ ಅಧ್ಯಕ್ಷತೆಯಲ್ಲಿ ದೇವಾಲಯದ ಸಭಾಂಗಣದಲ್ಲಿ ಜರಗಿತು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ, ಸಜಿಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್, ಸ್ವಾಗತ ಸಮಿತಿ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ , ಚರಣ್ ಮೊದಲಾದವರು ಭಾಗವಹಿಸಿದ್ದರು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಭರತನಾಟ್ಯ, ಜಾದೂ ಪ್ರದರ್ಶನ, ಯಕ್ಷ ಭಜನೆ, ಗಮಕ ವಾಚನ, ದಾಸವಾಣಿ, ಸಂಗೀತ, ಹರಿಕಥೆ ಸತ್ಸಂಗ, ಯಕ್ಷಗಾನ ತಾಳಮದ್ದಳೆ, ನಿತ್ಯ ವಿವಿಧ ಸಂತ ಮಂಡಳಿಗಳಿಂದ ಭಜನೆ ಸಂಕೀರ್ತನೆ ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು. ಪ್ರತಿದಿನ ಭಕ್ತಾದಿಗಳಿಗೆ ಬೆಳಿಗ್ಗೆ ಸಾಯಂಕಾಲ ಉಪಹಾರ, ಮಧ್ಯಾಹ್ನ- ರಾತ್ರಿ ಅನ್ನದಾನ ವ್ಯವಸ್ಥೆ ಮಾಡಲು ತೀರ್ಮಾನಿಸಲಾಯಿತು.

Sponsors

Related Articles

Back to top button