ಅತಿವೃಷ್ಟಿ ಪಟ್ಟಿಯಲ್ಲಿ ಸುಳ್ಯ ತಾಲೂಕು ಸೇರ್ಪಡೆಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮನವಿ…

ಸುಳ್ಯ: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುಳ್ಯ ತಾಲೂಕು ಅತಿಹೆಚ್ಚು ಮಳೆ ಬೀಳುವ ಪ್ರದೇಶವಾಗಿದ್ದು ಇಲ್ಲಿ ಹಲವಾರು ಮನೆಗಳಿಗೆ, ಕೃಷಿ ಬೆಳೆಗಳಿಗೆ ಹಾನಿಯಾಗಿ ಜನತೆ ಸಂಕಷ್ಟ ಕ್ಕೆ ಒಳಗಾಗಿದ್ದಾರೆ. ಅದರೆ ಅತಿವೃಷ್ಟಿ ಪಟ್ಟಿಯಲ್ಲಿ ಸುಳ್ಯ ಹೆಸರು ನಾಪತ್ತೆ ಯಾಗಿದೆ.
ಇದರ ಬಗ್ಗೆ ತಕ್ಷಣ ಗಮನಹರಿಸಿ ಅತಿವೃಷ್ಟಿ – ಪ್ರವಾಹ ಪೀಡಿತ ಪಟ್ಟಿಗೆ ಸುಳ್ಯ ತಾಲೂಕನ್ನು ಸೇರ್ಪಡೆ ಗೊಳಿಸಲು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಯಪ್ರಕಾಶ್ ರೈ ಯವರ ನೇತ್ರತ್ವದಲ್ಲಿ ತಹಶಿಲ್ದಾರ್ ಮೂಲಕ ಮುಖ್ಯಮಂತ್ರಿ ಗಳಿಗೆ ಮತ್ತು ಜಿಲ್ಲಾಧಿಕಾರಿ ಯವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಾಜಾರಾಮ್ ಬೆಟ್ಟ ,ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಸಂಶುದ್ದೀನ್ , ಇಂಟಕ್ ವಿಧಾನ ಸಭಾ ಕ್ಷೇತ್ರ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ಪೂರ್ಣಚಂದ್ರ ಕಣೆಮರಡ್ಕ, ಸಚಿನ್ ರಾಜ್ ಶೆಟ್ಟಿ ಪೆರುವಾಜೆ, ನಂದರಾಜ್ ಸಂಕೇಶ್, ಭವಾನಿ ಶಂಕರ ಕಲ್ಮಡ್ಕ, ಮೋಹಿತ್ ಹರ್ಲಡ್ಕ, ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button