ರೈಲಿನಲ್ಲಿ ಆಗಮಿಸಿದ ಕೇಂದ್ರ ಸಚಿವ ಪ್ರಹ್ಲಾದ್ ವಿ ಜೋಷಿ-ಬಿಜೆಪಿ ಮತ್ತು ಅಧಿಕಾರಿಗಳಿಂದ ರೈಲ್ವೇ ನಿಲ್ದಾಣದಲ್ಲಿ ಸ್ವಾಗತ….

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್‍ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಇಲಾಖೆಯ ಸಚಿವ ಪ್ರಹ್ಲಾದ್ ವಿ ಜೋಷಿ ಅವರು ಮಂಗಳವಾರ ಬೆಳಗ್ಗೆ ರೈಲಿನಲ್ಲಿ ಪುತ್ತೂರಿಗೆ ಆಗಮಿಸಿದರು. ಇಲ್ಲಿನ ಕಬಕ ಪುತ್ತೂರು ರೈಲು ನಿಲ್ದಾಣದಲ್ಲಿ ಬಿಜೆಪಿ ಮುಖಂಡರು ಹಾಗೂ ಅಧಿಕಾರಿಗಳು ಸಚಿವರನ್ನು ಸ್ವಾಗತಿಸಿದರು.
ವಿವೇಕಾನಂದ ಕಾಲೇಜಿನಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ಅದರ ಅಂಗ ಸಂಸ್ಥೆ ವಿವೇಕಾನಂದ ಅಧ್ಯಯನ ಕೇಂದ್ರ `ಯಶಸ್’ನ ನೇತೃತ್ವದಲ್ಲಿ ನಡೆಯುವ ‘ದೃಷ್ಠಿ’ ಎಂಬ ರಾಜ್ಯ ಮಟ್ಟದ ಐಎಎಸ್, ಐಪಿಎಸ್ ತರಬೇತಿ ಸಂಸ್ಥೆಗಳ ಮತ್ತು ವಿದ್ಯಾರ್ಥಿಗಳ ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಭಾಗವಹಿಸಲು ರೈಲಿನಲ್ಲಿ ಸಚಿವರು ಆಗಮಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾ.ಪಂ ಅದ್ಯಕ್ಷ ರಾಧಾಕೃಷ್ಣ ಬೋರ್ಕರ್, ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಹೆಚ್.ಕೆ.ಕೃಷ್ಣಮೂರ್ತಿ, ತಹಶೀಲ್ದಾರ್ ಅನಂತಶಂಕರ್, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಹರೀಶ್ ಬಿಜತ್ರೆ, ಬಿಜೆಪಿ ಜಿಲ್ಲಾ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಬಿಜೆಪಿ ಮಂಡಲದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಯಶಸ್‍ನ ಅಧ್ಯಕ್ಷ ಕೃಷ್ಣನಾರಾಯಣ ಮುಳಿಯ, ಬಿಜೆಪಿ ವಕ್ತಾದ ಆರ್.ಸಿ. ನಾರಾಯಣ, ಬಿಜೆಪಿ ನಗರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ರಾಮ್‍ದಾಸ್ ಹಾರಾಡಿ, ಗೌರಿ ಬನ್ನೂರು, ನಗರಸಭೆ ಸದಸ್ಯರಾದ ವಿದ್ಯಾ ಆರ್ ಗೌರಿ, ಶಿವರಾಮ ಸಪಲ್ಯ, ಬಾಲಚಂದ್ರ, ಮನೋಹರ್ ಕಲ್ಲಾರೆ, ಆರ್.ಸಿ.ನಾರಾಯಣ, ಪುರುಷೋತ್ತಮ ಮುಂಗ್ಲಿಮನೆ, ಸ್ವರ್ಣೋದ್ಯಮಿ ಮುಳಿಯ ಕೃಷ್ಣನಾರಾಯಣ, ಶಂಭು ಭಟ್, ತಾ.ಪಂ ಸದಸ್ಯ ಲಕ್ಷ್ಮಣ ಗೌಡ ಬೆಳ್ಳಿಪ್ಪಾಡಿ, ಸಂಪತ್ ಕುಮಾರ್, ಸೇರಿದಂತ ಹಲವಾರು ಮಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button