3000 ಕೊರೋನಾ ಸೋಂಕಿತರು ಬೆಂಗಳೂರಿನಿಂದ ಪರಾರಿ – ಸಚಿವ ಅಶೋಕ್…

ಬೆಂಗಳೂರು: ಸುಮಾರು 3,000 ಕೋವಿಡ್ -19 ಸೋಂಕಿತರು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಣೆಯಾಗಿದ್ದಾರೆ ಕಂದಾಯ ಸಚಿವ ಆರ್. ಅಶೋಕ್ ಅವರು ಹೇಳಿದ್ದಾರೆ .
ಬುಧವಾರ ಹೆಚ್ಚಿನ ಸೋಂಕಿತ ಜನರು ತಮ್ಮ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಮತ್ತು ಬೆಂಗಳೂರಿನಿಂದ ಕಾಣೆಯಾಗಿದ್ದಾರೆ. ಬೆಂಗಳೂರಿನಿಂದ ‘ಕಾಣೆಯಾದ’ ಸುಮಾರು 3 ಸಾವಿರ ಜನರು ಈ ರೋಗವನ್ನು ಹರಡುತ್ತಿದ್ದಾರೆ. ಅವರನ್ನು ಪತ್ತೆ ಹಚ್ಚಲು ಪೊಲೀಸರಿಗೆ ತಿಳಿಸಲಾಗಿದೆ ಎಂದು ಮಾಧ್ಯಮಗಳಿಗೆ ಅವರು ತಿಳಿಸಿದ್ದಾರೆ.
ಪಾಸಿಟಿವ್ ಅಂತ ನಿಮಗೆ ಸಂದೇಶ ಬಂದರೆ, ದಯವಿಟ್ಟು ಕೂಡಲೇ ಆಸ್ಪತ್ರೆಗೆ ದಾಖಲಾಗಿ. ಕೆಲವು ಮಂದಿ ತಮ್ಮ ಮೊಬೈಲ್ ಅನ್ನು ಸ್ವಿಚ್ ಆಫ್ ಮಾಡಿಕೊಂಡು ತಮ್ಮ ಮನೆಯಲ್ಲಿಯೇ ಬಿಟ್ಟು ಹೋಗುತ್ತಿದ್ದಾರೆ. ತಮ್ಮ ಆರೋಗ್ಯದಲ್ಲಿ ಏರುಪೇರು ಆದ ಕೂಡಲೇ ತಲೆ ಮರೆಸಿಕೊಳ್ಳುತ್ತಿದ್ದು, ಹೀಗೆ ಮಾಡಬೇಡಿ, ಎಂದೂ ಅವರು ಮನವಿ ಮಾಡಿಕೊಂಡರು.

Sponsors

Related Articles

Leave a Reply

Your email address will not be published. Required fields are marked *

Back to top button