ಅಂತರ್ ವಿಶ್ವವಿದ್ಯಾನಿಲಯ ಖೇಲೋ ಇಂಡಿಯಾ ಸ್ಪರ್ಧೆಗೆ ಆಯ್ಕೆ….

ಪುತ್ತೂರು: ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಸುಹಾಸ್.ಪಿ.ಎಮ್ ಅಖಿಲ ಭಾರತ ಪ್ರಥಮ ಅಂತರ್ ವಿಶ್ವವಿದ್ಯಾನಿಲಯ ಖೇಲೋ ಇಂಡಿಯಾ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಒರಿಸ್ಸಾದ ಬುಬನೇಶ್ವರ್‍ನಲ್ಲಿ ಫೆಬ್ರವರಿ 21ರಿಂದ ನಡೆಯುವ ಈ ಕ್ರೀಡಾಕೂಟದ ಈಜು ಸ್ಪರ್ಧೆಯ 400 ಮೀ ಫ್ರೀಸ್ಟೈಲ್ ಹಾಗೂ 200 ಮೀ ಬಟರ್ ಫ್ಲೈ ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ. ಕಳೆದ ನವಂಬರ್ ತಿಂಗಳಲ್ಲಿ ಪಂಜಾಬಿನಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಈಜು ಸ್ಪರ್ಧೆಯಲ್ಲಿನ ಸಾಧನೆಯನ್ನು ಪರಿಗಣಿಸಿ ಈ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಸುಹಾಸ್ ಅವರಿಗೆ ಪಾರ್ಥ ವಾರಣಾಸಿ ಹಾಗೂ ನಿರೂಪ್.ಜಿ.ಆರ್ ಅವರು ತರಬೇತಿ ನೀಡಿದ್ದು, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದೇಗೌಡ ತಿಳಿಸಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button