ಅನಂತಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿ ಸಭೆ……

ಬಂಟ್ವಾಳ: ಶಾಂತಿ ಧಾಮ ಹಿಂದೂ ರುದ್ರ ಭೂಮಿ ಸಮಿತಿ ಸಭೆಯು ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ಸ್ಮಶಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಗಣೇಶ್ ಪೂಜಾರಿ ಅಧ್ಯಕ್ಷತೆಯಲ್ಲಿ ಇತ್ತೀಚಿಗೆ ಜರಗಿತು. ಸಭೆಯಲ್ಲಿ ಗ್ರಾ..ಪಂ. ಅಧ್ಯಕ್ಷ ಸನತ್ ಕುಮಾರ್ ರೈ ಮಾತನಾಡಿ ಅಭಿವೃದ್ಧಿಗೆ ಬೇಕಾದ ಅನುದಾನವನ್ನು ಒದಗಿಸಲಾಗುವುದು ಎಂದು ತಿಳಿಸಿದರು. ತಾ.ಪಂ ಸದಸ್ಯೆ ಗೀತಾ ಮಾತನಾಡಿ ತಾಲೂಕು ಪಂಚಾಯತ್‍ನಿಂದ ಅನುದಾನ ಒದಗಿಸುವ ಬಗ್ಗೆ ಭರವಸೆ ನೀಡಿದರು. ಸಭೆಯಲ್ಲಿ ಪ್ರಮುಖರಾದ ಚಂದಪ್ಪ ಮಾಸ್ಟರ್, ಗಂಗಾಧರ ಆಳ್ವ , ಅರವಿಂದ ಕೊಂಡೆ , ನಾರಾಯಣ ಸಾಲ್ಯಾನ್ ಉಪಸ್ಥಿತರಿದ್ದರು. ಪಂ. ಅಭಿವೃದ್ಧಿ ಅಧಿಕಾರಿ ಜಯರಾಮ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ಸ್ಮಶಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸುರೇಶ ಬಂಟ್ರಿಂಜ ಸಹಕರಿಸಿದರು.

Sponsors

Related Articles

Leave a Reply

Your email address will not be published. Required fields are marked *

Back to top button