ಕರ್ಣಾಟಕ ಬ್ಯಾಂಕ್‌: ಚೇರ್‌ಮನ್‌ ಆಗಿ ಜಯರಾಮ್‌ ಭಟ್‌, ಎಂಡಿ-ಸಿಇಒ ಆಗಿ ಮಹಾಬಲೇಶ್ವರ ಎಂ.ಎಸ್‌…

ಮಂಗಳೂರು: ಪ್ರತಿಷ್ಠಿತ ಕರ್ಣಾಟಕ ಬ್ಯಾಂಕಿನ ಚೇರ್‌ಮನ್‌ ಆಗಿ ಪಿ. ಜಯರಾಮ್‌ ಭಟ್‌ ಹಾಗೂ ಮ್ಯಾನೇಜಿಂಗ್‌ ಡೈರೆಕ್ಟರ್‌ ಮತ್ತು ಚೀಫ್‌ ಎಕ್ಸಿಕ್ಯೂಟಿವ್‌ ಆಫೀಸರ್‌ ಆಗಿ ಮಹಾಬಲೇಶ್ವರ ಎಂ.ಎಸ್‌. ಅವರು ಭಾರತೀಯ ರಿಸರ್ವ್‌ ಬ್ಯಾಂಕಿನ ಅನುಮೋದನೆಯಂತೆ ಎರಡನೇ ಅವಧಿಗೆ ಪುನರಾಯ್ಕೆಗೊಂಡಿದ್ದಾರೆ.

ಈ ಆದೇಶದ ಅನ್ವಯ ಪಿ. ಜಯರಾಮ್‌ ಭಟ್‌ ಅವರು 2021ರ ನ. 13ರ ಅವಧಿಯವರೆಗೆ ಚೇರ್‌ಮನ್‌ ಆಗಿ ಮುಂದುವರಿದರೆ, ಮಹಾಬಲೇಶ್ವರ ಎಂ.ಎಸ್‌. ಅವರು ಮುಂದಿನ ಮೂರು ವರ್ಷಗಳ ಪರ್ಯಂತ ಬ್ಯಾಂಕಿನ ಮ್ಯಾನೇಜಿಂಗ್‌ ಡೈರೆಕ್ಟರ್‌ ಹಾಗೂ ಚೀಫ್‌ ಎಕ್ಸಿಕ್ಯೂಟಿವ್‌ ಆಫೀಸರ್‌ ಆಗಿ ಬ್ಯಾಂಕನ್ನು ಮುನ್ನಡೆಸಲಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button