ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಬಂಟ್ವಾಳ ವಲಯ ಸಮಿತಿ ಪುನರ್ ರಚನೆ….

ಬಂಟ್ವಾಳ: ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ ಬಂಟ್ವಾಳ ವಲಯ ಸಮಿತಿ ಪುನರ್ ರಚನೆ ಮತ್ತು ಸ್ಮಾರ್ಟ್ ಕಾರ್ಡ್ ವಿತರಣೆ ಬಡ್ಡಕಟ್ಟೆಯಲ್ಲಿ ನಡೆಯಿತು.
ನೂತನ ಅಧ್ಯಕ್ಷರಾಗಿ ಎ. ವಸಂತ ಮೂಲ್ಯ ,ಪ್ರಧಾನ ಕಾರ್ಯದರ್ಶಿಯಾಗಿ ತುಳಸಿ ಅರ್ ,ಕೋಶಾಧಿಕಾರಿಯಾಗಿ ಮಲ್ಲಿಕಾ ಕುಲಾಲ್ ಇವರನ್ನು ಸರ್ವಾನು ಮತದಿಂದ ಆಯ್ಕೆ ಮಾಡಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಭೆಯಲ್ಲಿ ರಾಜ್ಯದ ಉಪಾಧ್ಯಕ್ಷರಾದ ಸುರೇಶ್ ಸಾಲ್ಯಾನ್, ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಂತ್ ಉರ್ಲಾಂಡಿ, ಜಿಲ್ಲಾ ಸಂಘಟನ ಕಾರ್ಯದರ್ಶಿ ಸತೀಶ್ ಅಮರ್, ಬಿ.ಸಿ.ರೋಡ್ ಬಂಟ್ವಾಳ ಕ್ಷೇತ್ರದ ಅಧ್ಯಕ್ಷರಾದ ಈಶ್ವರ್ ಕುಲಾಲ್, ಪ್ರಧಾನ ಕಾರ್ಯದರ್ಶಿಯಾದ ನಾಗೇಶ್ ಎಮ್, ಕೋಶಾಧಿಕಾರಿಯಾದ ಯಾದೇಶ್ ತುಂಬೆ ಹಾಗೂ ಕ್ಷೇತ್ರದ ಮಾಜಿ ಅಧ್ಯಕ್ಷರಾದ ಜಿ ಅನಂದ್ ಭಾಗವಹಿಸಿದ್ದರು. ನಾಗೇಶ್ ಎಮ್ ಕಾರ್ಯಕ್ರಮ ನಿರೂಪಿಸಿದರು. ಎ ವಸಂತ ಮೂಲ್ಯ ಧನ್ಯವಾದ ಸಮರ್ಪಿಸಿದರು.

Sponsors

Related Articles

Leave a Reply

Your email address will not be published. Required fields are marked *

Back to top button