ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ವತಿಯಿಂದ ಪ್ರೋತ್ಸಾಹ ಧನ ವಿತರಣೆ…..

ಬಂಟ್ವಾಳ:ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘ ಇದರ ವತಿಯಿಂದ ವಿಕಲಚೇತನ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಸಂಘದ ದಾನ ನಿಧಿಯಿಂದ ಕೊಡಲ್ಪಡುವ ಪ್ರೋತ್ಸಾಹ ಧನ ಸಹಾಯವನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಇಲ್ಲಿ ಒಂದನೇ ತರಗತಿಯಲ್ಲಿ ಕಲಿಯುತ್ತಿರುವ ಫಾತಿಮತ್ ಅಲಿಫ ಳಿಗೆ ಸಂಘದ ಅಧ್ಯಕ್ಷರಾದ ಪದ್ಮನಾಭ ಕೊಟ್ಟಾರಿ ಕಲ್ಲಡ್ಕ ನೀಡಿದರು.
ಈ ಸಂದರ್ಭದಲ್ಲಿ ಕಲ್ಲಡ್ಕ ರೈತರ ಸೇವಾ ಸಂಘ ಇದರ ನಿರ್ದೇಶಕರಾದ ಕೊರಗಪ್ಪ ನಾಯ್ಕ ಸಿಂಗೆರಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಶ್ ಕೆ ,ವೀರಕಂಭ ಶಾಖಾ ವ್ಯವಸ್ಥಾಪಕ ರಾದ ಶ್ರೀಮತಿ ವನಿತ, ಶಾಲಾ ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಛಾಯಾಗ್ರಾಹಕ ಚಿನ್ನ ಮೈರ, ವಿದ್ಯಾರ್ಥಿನಿಯ ಪೋಷಕರಾದ ಮಹಮ್ಮದ್ ಹೈದರ್, ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button