ಕುಕ್ಕೆಸುಬ್ರಹ್ಮಣ್ಯದಲ್ಲಿ ಇಂದು ನಡೆಯಬೇಕಿದ್ದ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ರದ್ದು…..

ಸುಬ್ರಹ್ಮಣ್ಯ: ಆಡಳಿತ ಮಂಡಳಿಯ ಅಧಿಕಾರ ಅವಧಿ ಮುಕ್ತಾಯದ ಒಂದು ದಿನದ ಹಿಂದೆ ಅಂದರೆ ಅ.14ರಂದು ಕ್ಷೇತ್ರದಲ್ಲಿ ನಡೆಸಲಾಗಿದ್ದ ಹಲವು ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಕಾರ್ಯಕ್ರಮ ರದ್ದುಗೊಂಡಿದೆ.
ಸೋಮವಾರ ಬೆಳಗ್ಗೆ ಉದ್ಘಾಟನೆಗಳು ಆಗಬೇಕಿತ್ತು. ಈಗಿನ ಆಡಳಿತ ಸಮಿತಿಗೆ ಯಾವುದೇ ಅಧಿಕಾರ ಇಲ್ಲ ಎಂದು ಅಧಿಕಾರಿಗಳಿಂದ ಸೂಚನೆ ಬಂದ ಮೇರೆಗೆ ನಡೆಯಬೇಕಿದ್ದ ಎಲ್ಲ ಉದ್ಘಾಟನೆ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ.
ದೇಗುಲದ ಈಗಿನ ಆಡಳಿತ ಮಂಡಳಿ ಅವಧಿ ಅ.13ಕ್ಕೆ ಮುಕ್ತಾಯಗೊಂಡಿತ್ತು. ಆದರೆ ಅ.15ಕ್ಕೆ ನಮ್ಮ‌ ಆಡಳಿತ ಅವಧಿ ಪೂರ್ಣವಾಗುತ್ತದೆ ಎಂದು ಈಗಿನ ಆಡಳಿತ ಮಂಡಳಿ ಹೇಳಿಕೊಂಡಿತ್ತು. ಈ ಬೆಳವಣಿಗೆ ಸಾಕಷ್ಟು ಚರ್ಚೆಗಳಿಗೆ ಎಡೆಮಾಡಿಕೊಟ್ಟಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಾರ್ಯನಿರ್ವಹಣಾಧಿಕಾರಿ ಆಗಿದ್ದ ರವೀಂದ್ರ ಎಂ.ಎಚ್ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಮಂಗಳೂರು ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ವೆಂಕಟೇಶ್ ಅವರು ಸೋಮವಾರದಿಂದ ದೇಗುಲದ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button