ಕೊಲೆ ಪ್ರಕರಣದ ಆರೋಪಿ ಬಂಧನ…..

ಮಂಗಳೂರು: ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಪ್ರಮುಖ ಆರೋಪಿ ಫರಂಗಿಪೇಟೆ ಮಾರಿಪಳ್ಳ ನಿವಾಸಿ ಜಬ್ಬಾರ್ ಯಾನೆ ಮಾರಿಪಳ್ಳ ಜಬ್ಬಾರ್ (42) ನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಈತ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಎಂಬಲ್ಲಿ 2017 ಸಪ್ಟೆಂಬರ್ 26ರಂದು ನಡೆದ ಜಿಯಾ ಮತ್ತು ಫಯಾಝ್ ಎಂಬವರುಗಳ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ಬಂಟ್ವಾಳ ವೃತ್ತ ನಿರೀಕ್ಷಕರವರು ಹಾಗೂ ಸಿಬ್ಬಂದಿಗಳು ಮಂಗಳೂರಿನ ಕಂಕನಾಡಿಯಲ್ಲಿ ಈತನನ್ನು ವಶಕ್ಕೆ ಪಡೆದಿದ್ದು ಕಾನೂನು ಕ್ರಮಕ್ಕಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿರುತ್ತದೆ.

Sponsors

Related Articles

Leave a Reply

Your email address will not be published. Required fields are marked *

Back to top button