ಚಂದ್ರಶೇಖರ ಪೇರಾಲು ಅವರಿಗೆ ಯೆನೆಪೊಯ ಉತ್ತಮ ಶಿಕ್ಷಕ ಪ್ರಶಸ್ತಿ….

ಮಂಗಳೂರು: ಯೆನೆಪೊಯ ಸಮೂಹ ಸಂಸ್ಥೆಗಳ ಸಂಸ್ಥಾಪಕ ದಿವಂಗತ ಯೆನೆಪೊಯ ಮೊಹಿಯುದ್ದೀನ್ ಕುಂಞಿ ಸ್ಮರಣಾರ್ಥ ಸಂಸ್ಥೆಯ ಸಂಸ್ಥಾಪಕರ ದಿನವಾದ ನ.14ರಂದು ನೀಡಲಾಗುವ 2019 ನೇ ಸಾಲಿನ ಯೆನೆಪೊಯ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ನಗರದ ಯೆನೆಪೊಯ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ನಡೆಯಿತು.
ಸರಕಾರಿ ಶಾಲೆಗಳ ಮೂಲಕ ಉನ್ನತ ಸಾಧನೆಗೈದ ಶಿಕ್ಷಕರಿಗೆ ನೀಡಲಾಗುವ ಈ ಪ್ರಶಸ್ತಿಯನ್ನು ಪ್ರೌಢಶಾಲಾ ವಿಭಾಗದಲ್ಲಿ ಸುಳ್ಯ ತಾಲೂಕಿನ ಎಲಿಮಲೆ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಚಂದ್ರಶೇಖರ ಪೇರಾಲು ಹಾಗೂ ಪ್ರಾಥಮಿಕ ವಿಭಾಗದಲ್ಲಿ ಬೈಲು ಪ್ರಾಥಮಿಕ ಶಾಲಾ ಶಿಕ್ಷಕ ಎಡ್ವರ್ಡ್ ಡಿಸೋಜರಿಗೆ ಅವರಿಗೆ ಪ್ರದಾನ ಮಾಡಲಾಯಿತು. ಪ್ರಶಸ್ತಿಯನ್ನು ಯೆನೆಪೊಯ (ಪರಿಗಣಿತ) ವಿವಿ ಕುಲಾಧಿಪತಿ ವೈ.ಅಬ್ದುಲ್ಲಾ ಕುಂಞಿ ಪ್ರದಾನ ಮಾಡಿದರು.
ಸಮಾರಂಭದಲ್ಲಿ ಯೆನೆಪೊಯ ವಿವಿ ಸಹ ಕುಲಪತಿ ಫರ್ಹಾದ್ ಯೆನೆಪೊಯ, ಯೆನೆಪೊಯ ಪಪೂ ಕಾಲೇಜಿನ ಪ್ರಾಂಶುಪಾಲ ಜೋಸೆಫ್ ಮಚಿರಾತ್, ಶಾಲಾ ಕ್ಯಾಂಪಸ್ ನಿರ್ದೇಶಕಿ ಮಿಶ್ರಿಯಾ ಜಾವೆದ್, ಶಾಲಾ ಉಪ ಪ್ರಾಂಶುಪಾಲ ರೇಶ್ಮಾ ನಾಯಕ್, ಯೆನೆಪೊಯ ಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯೆ ನಸ್ರೀನಾ ಅಬ್ದುಲ್ಲಾ ಮತ್ತಿತರರು ಉಪಸ್ಥಿತರಿದ್ದರು.ಅನಿಲ್ ಕಾರ್ಯಕ್ರಮ ನಿರೂಪಿಸಿದರು.

Sponsors

Related Articles

Leave a Reply

Your email address will not be published. Required fields are marked *

Back to top button