ಚರ್ಚೆಗೆ ಗ್ರಾಸವಾಗುತ್ತಿರುವ ಡಾಕ್ಟರ್ ವೇಷ ತೊಟ್ಟ ಪರಮೇಶ್ವರ್ ರಿಂದ ಶಿವಕುಮಾರ್ ಭೇಟಿ….

ಬೆಂಗಳೂರು: ಅಕ್ರಮ ಹಣಕಾಸು ವರ್ಗಾವಣೆ ಆರೋಪದಡಿಯಲ್ಲಿ ಜಾರಿ ನಿರ್ದೇಶನಾಯದಿಂದ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ದೆಹಲಿ ಆಸ್ಪತ್ರೆಯಲ್ಲಿ ಮಾಜಿ ಡಿಸಿಎಂ ಪರಮೇಶ್ವರ್ ಡಾಕ್ಟರ್ ವೇಷತೊಟ್ಟು ಭೇಟಿಯಾಗಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.
ಸೆಪ್ಟಂಬರ್ 3 ರಂದು ಇಡಿಯಿಂದ ಬಂಧನಕ್ಕೊಳಗಾಗಿದ್ದ ಡಿಕೆ ಶಿವಕುಮಾರ್ ಅನಾರೋಗ್ಯದಿಂದ ದೆಹಲಿಯ ರಾಮ್‌ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಡಿಕೆಶಿ ಭೇಟಿಯಾಗಲು ಮಾಜಿ ಸಿಎಂ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಹಾಗೂ ಪರಮೇಶ್ವರ್ ತೆರಳಿದ್ದರು.ಕಾಂಗ್ರೆಸ್ ನಾಯಕರಿಗೆ ಡಿಕೆಶಿ ಭೇಟಿಯಾಗಲು ಆಸ್ಪತ್ರೆ ಸಿಬಂಧಿ ಅವಕಾಶ ನೀಡಿರಲಿಲ್ಲ. ಈ ಕಾರಣದಿಂದ ಸಿದ್ದರಾಮಯ್ಯ ದೆಹಲಿಯಿಂದ ವಾಪಸಾಗಿದ್ದರು. ಆದರೆ ಮಾಜಿ ಡಿಸಿಎಂ ಪರಮೇಶ್ವರ್ ಹೇಗಾದರೂ ಮಾಡಿ ಡಿಕೆಶಿ ಭೇಟಿಯಾಗಬೇಕೆಂದು ಬಿಳಿ ಬಣ್ಣದ ಕೋಟ್ ತೊಟ್ಟು ಹೆಗಲಲ್ಲಿ ಸ್ಟೆತಸ್ಕೋಪ್ ಹಾಕಿಕೊಂಡು ಬಂದಿದ್ದರು ಎಂದು ಡಿಕೆ ಶಿವಕುಮಾರ್ ಶನಿವಾರ ಕಾಂಗ್ರೆಸ್ ಕಚೇರಿಯಲ್ಲಿ ನಡೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಬಹಿರಂಗಪಡಿಸಿದ್ದರು. ಸದ್ಯ ಇದು ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದೆ.

Sponsors

Related Articles

Leave a Reply

Your email address will not be published. Required fields are marked *

Back to top button