ಡಿಕೆಶಿ ಭೇಟಿಯಾದ ವಿಪಕ್ಷ ನಾಯಕ ಸಿದ್ದರಾಮಯ್ಯ…..

ಬೆಂಗಳೂರು:ವಿಧಾನಸಭೆ ಪ್ರತಿಪಕ್ಷ ಸಿದ್ದರಾಮಯ್ಯ ಇಂದು ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ದೆಹಲಿಯ ತಿಹಾರ್ ಜೈಲಿನಲ್ಲಿದ್ದ ಡಿಕೆ ಶಿವಕುಮಾರ್ ಮೂರು ದಿನಗಳ ಹಿಂದೆಯಷ್ಟೇ ಬಿಡುಗಡೆಯಾಗಿ ಶನಿವಾರ ಬೆಂಗಳೂರಿಗೆ ಆಗಮಿಸಿದ್ದರು. ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿದಂತೆ ಪಕ್ಷದ ಹಲವು ಮುಖಂಡರು ಕಾಣಿಸಿಕೊಂಡಿದ್ದರೂ ಸಿದ್ದರಾಮಯ್ಯ ಆಗಮಿಸರಿಲಿಲ್ಲ. ಇಂದು ಬೆಳಗ್ಗೆ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ತೆರಳಿ ಅವರೊಂದಿಗೆ ಹಲವು ವಿಚಾರಗಳ ಕುರಿತಂತೆ ಮಾತುಕತೆ ನಡೆಸಿದ್ದಾರೆ
ರಾಜಕೀಯ ದ್ವೇಷಕ್ಕೆ ಬಲಿಯಾಗಿ ಕಿರುಕುಳಕ್ಕೊಳಗಾದರೂ ಡಿಕೆ ಶಿವಕುಮಾರ್ ಅವರು ಆತ್ಮ ವಿಶ್ವಾಸದಿಂದ ಇದ್ದಾರೆ. ಕಾಂಗ್ರೆಸ್ ಪಕ್ಷ ಅವರ ಜೊತೆಯಲಿದೆ.ಅವರಿಗೆ ದೀಪಾವಳಿಯ ಶುಭ ಹಾರೈಸಿರುವುದಾಗಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಐಟಿ ದಾಳಿ ನಡೆಸುವುದಾದರೆ ಪಕ್ಷಾತೀತವಾಗಿ ಮಾಡಲಿ, ಬಿಜೆಪಿ ನಾಯಕರೇನು ಹರಿಶ್ಚಂದ್ರರಾ? ಎಂದು ಪ್ರಶ್ನಿಸಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button