ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನಕ್ಕೆ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ….

ಸುಳ್ಯ: ಸುಳ್ಯ ತಾಲೂಕು ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನಕ್ಕೆ ರಾಜ್ಯದ ಗಡಿನಾಡಿನಲ್ಲಿ
ಶಿಕ್ಷಣ ಹಾಗು ಸಮಾಜಸೇವೆಗಾಗಿ ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ ) ಕಾಸರಗೋಡು ಇದರ 30 ನೇ ಸಂಸ್ಥಾಪನಾ ವರ್ಷಾಚರಣೆಯ ಪ್ರಯುಕ್ತ ನೀಡುವ ಪ್ರತಿಷ್ಠಿತ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಾಷ್ಟ್ರೀಯ ಪ್ರಶಸ್ತಿಯನ್ನು ಜನವರಿ 30 ರಂದು ಕಾಸರಗೋಡಿನಲ್ಲಿ ನಡೆದ 7 ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನ 2020 ಸಮಾರಂಭದಲ್ಲಿ ಸಿ. ಟಿ ರವಿ ಮಾನ್ಯ ಸಚಿವರು, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಇವರ ಪರವಾಗಿ
ಕುಂಟಾರು ಶ್ರೀ ರವೀಶ್ ತಂತ್ರಿ ಯವರು ಸಂಸ್ಥೆಯ ಸ್ಥಾಪಕಾಧ್ಯಕ್ಷ ಟಿ. ಎಂ. ಶಾಹಿದ್ ಅವರರಿಗೆ ಪ್ರಸಸ್ತಿ ಪ್ರಧಾನ ಮಾಡಿದರು. ಈ ಸಂಧರ್ಭದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು, ಟಿ. ಎಂ. ಶಾಝ್ ತೆಕ್ಕಿಲ್ ಹಾಗು ಟಿ. ಎಂ. ಶೈನ್ ತೆಕ್ಕಿಲ್ ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button