ದ.ಕ ಜಿಲ್ಲೆಯಾದ್ಯಂತ ಜ್ವರ ಚಿಕಿತ್ಸಾಲಯ ಆರಂಭ…

ಮಂಗಳೂರು: ಜ್ಷರ, ಕೆಮ್ಮು, ಗಂಟಲು ಕೆರೆತ ಅಥವಾ ಉಸಿರಾಟದ ತೊಂದರೆಯಂತಹ ಕೊರೋನಾ ವೈರಸ್‍ ರೋಗ ಲಕ್ಷಣಗಳನ್ನು ಹೊಂದಿರುವ ಯಾವುದೇ ಶಂಕಿತ ವ್ಯಕ್ತಿ ಮೊದಲ ತಪಾಸಣೆಗಾಗಿ ದ.ಕ ಜಿಲ್ಲೆಯಾದ್ಯಂತ ಜ್ವರ ಚಿಕಿತ್ಸಾಲಯಗಳನ್ನು ಆರಂಭಿಸಲಾಗಿದೆ. ಸಾರ್ವಜನಿಕರು ಈ ಕೇಂದ್ರಗಳಿಗೆ ಭೇಟಿ ನೀಡಿ, ತಮ್ಮ ವೈದ್ಯಕೀಯ ತಪಾಸಣೆ ನಡೆಸಬಹುದಾಗಿದೆ.
ಜ್ವರ ಕ್ಲಿನಿಕ್‍ಗಳ ವಿವರ ಹೀಗಿದೆ : ಎ.ಜೆ ಮೆಡಿಕಲ್‍ ಕಾಲೇಜು, ಫಾದರ್ ಮುಲ್ಲರ್ ಆಸ್ಪತ್ರೆ, ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ, ಯೆನೆಪೋಯ ಆಸ್ಪತ್ರೆ, ದೇರಳಕಟ್ಟೆ, ಶ್ರೀನಿವಾಸ್ ಮೆಡಿಕಲ್‍ ಕಾಲೇಜು ಮುಕ್ಕ ಸುರತ್ಕಲ್, ಕೆ.ಎಸ್. ಹೆಗ್ಡೆ ಆಸ್ಪತ್ರೆ, ಕೆ.ವಿ.ಜಿ ಆಸ್ಪತ್ರೆ, ಸುಳ್ಯ, ಕಣಚೂರು ಆಸ್ಪತ್ರೆ, ವೆನ್ಲಾಕ್‍ ಆಸ್ಪತ್ರೆ ಮಂಗಳೂರು, ತಾಲೂಕು ಸರ್ಕಾರಿ ಆಸ್ಪತ್ರೆ ಬೆಳ್ತಂಗಡಿ, ಸರ್ಕಾರಿ ಆಸ್ಪತ್ರೆ ಪುತ್ತೂರು, ತಾಲೂಕು ಆಸ್ಪತ್ರೆ ಬಂಟ್ವಾಳ, ಸಮುದಾಯ ಆರೋಗ್ಯ ಕೇಂದ್ರ ಸುಳ್ಯ.
ಕ್ವಾರೆಂಟೈನ್ ಮೇಲ್ವಿಚಾರಣೆ ಕೇಂದ್ರಗಳ ವಿವರ ಹೀಗಿದೆ : ಯಾವುದೇ ರೋಗ ಲಕ್ಷಣ ಇಲ್ಲದಿದ್ದರೂ, ಕೋವಿಡ್ 19 ಸಂಪರ್ಕ ಸಾಧ್ಯತೆ ಇರುವವರನ್ನು ನಿಗಾವಣೆಯಲ್ಲಿಡಲು ಕ್ವಾರೆಂಟೈನ್ ಮೇಲ್ವಿಚಾರಣಾ ಕೇಂದ್ರಗಳನ್ನು ತೆರೆಯಲಾಗಿದೆ.ಇ.ಎಸ್.ಐ ಆಸ್ಪತ್ರೆ ಮಂಗಳೂರು, ಇಂಡಿಯಾನ ಆಸ್ಪತ್ರೆ, ಎನ್.ಐ.ಟಿ.ಕೆ ಹಾಸ್ಟೆಲ್ ಸುರತ್ಕಲ್, ಯೆನೆಪೊಯ ಹಾಸ್ಟೆಲ್ ದೇರಳಕಟ್ಟೆ.

ಪ್ರತ್ಯೇಕ ಮೇಲ್ವಿಚಾರಣೆ ಕೇಂದ್ರಗಳು : ಶಂಕಿತ ಕರೋನಾ ರೋಗಿಗಳನ್ನು ಪ್ರತ್ಯೇಕವಾಗಿಡಲು ಜಿಲ್ಲೆಯ 13 ಆಸ್ಪತ್ರೆಗಳಲ್ಲಿ ಪ್ರತ್ಯೇಕ ನಿಗಾವಣೆ ಕೇಂದ್ರಗಳನ್ನು ತೆರೆಯಲಾಗಿದೆ. ಎ.ಜೆ ಮೆಡಿಕಲ್‍ ಕಾಲೇಜು ಆಸ್ಪತ್ರೆ ಮಂಗಳೂರು, ಫಾದರ್ ಮುಲ್ಲರ್ ಆಸ್ಪತ್ರೆ, ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ, ಯೆನೆಪೋಯ ಆಸ್ಪತ್ರೆ ದೇರಳಕಟ್ಟೆ, ಶ್ರೀನಿವಾಸ್ ಮೆಡಿಕಲ್‍ ಕಾಲೇಜು ಆಸ್ಪತ್ರೆ ಮುಕ್ಕ ಸುರತ್ಕಲ್, ಕೆ.ಎಸ್. ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ, ಕೆ.ವಿ.ಜಿ ಆಸ್ಪತ್ರೆ ಸುಳ್ಯ, ಕಣಚೂರು ಆಸ್ಪತ್ರೆ, ವೆನ್ಲಾಕ್‍ ಆಸ್ಪತ್ರೆ, ,ತಾಲೂಕು ಸರ್ಕಾರಿ ಆಸ್ಪತ್ರೆ ಬೆಳ್ತಂಗಡಿ, ಸರ್ಕಾರಿ ಆಸ್ಪತ್ರೆ ಪುತ್ತೂರು, ತಾಲೂಕು ಆಸ್ಪತ್ರೆ ಬಂಟ್ವಾಳ, ಸಮುದಾಯ ಆರೋಗ್ಯ ಕೇಂದ್ರ ಸುಳ್ಯ.

ಜಿಲ್ಲಾ ವೆನ್ಲಾಕ್‍ ಆಸ್ಪತ್ರೆಯು ಕೋವಿಢ್‍ ದೃಢಪಟ್ಟು, ತುರ್ತುಚಿಕಿತ್ಸೆ ಹಾಗೂ ಗಂಭೀರಾವಸ್ಥೆಯಲ್ಲಿರುವ ರೋಗಿಗಳಿಗೆ ಚಿಕಿತ್ಸೆ ನೀಡಲಿದೆ. ರಾಜ್ಯ ಕೋವಿಡ್ 19 ತುರ್ತು ಕ್ರಿಯಾ ಯೋಜನೆಯಂತೆ ಈ ಎಲ್ಲಾ ಸೌಲಭ್ಯಗಳ ಬಗ್ಗೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‍ ಅಧಿಸೂಚನೆ ಹೊರಡಿಸಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button