ದ.ಕ – ಮೂರು ಪ್ರದೇಶಗಳು ಕಂಟೈನ್ ಮೆಂಟ್ ವಲಯದಿಂದ ಮುಕ್ತ….

ಮಂಗಳೂರು: ಕೊರೋನ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಮೂರು ಪ್ರದೇಶಗಳನ್ನು ಕಂಟೈನ್ ಮೆಂಟ್ ವಲಯದಿಂದ ಮುಕ್ತಗೊಳಿಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಆದೇಶಿಸಿದ್ದಾರೆ.
ಬಂಟ್ವಾಳ ತಾಲೂಕಿನ ಸಜಿಪನಡು, ಬೆಳ್ತಂಡಿ ತಾಲೂಕಿನ ಕರಾಯ ಮತ್ತು ಸುಳ್ಯದ ಅಜ್ಜಾವರ ಪ್ರದೇಶಗಳನ್ನು ಕಂಟೈನ್ ಮೆಂಟ್ ವಲಯದಿಂದ ಮುಕ್ತಗೊಳಿಸಲಾಗಿದೆ.
ಈ ಪ್ರದೇಶದಲ್ಲಿ ಕಳೆದ 28 ದಿನಗಳಲ್ಲಿ ಯಾವುದೇ ಹೊಸ ಪ್ರಕರಣಗಳು ಪತ್ತೆಯಾಗದ ಕಾರಣ ಹಾಗೂ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಗಳ ಕ್ವಾರೆಂಟೈನ್ ಮುಕ್ತಾಯಗೊಂಡಿರುವುದರಿಂದ ಈ ನಿರ್ಧಾರ ಮಾಡಲಾಗಿದೆ. ಈ ಮೂರು ಪ್ರದೇಶದಲ್ಲಿ ರೋಗಿಗಳು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.
ಪ್ರಸ್ತುತ ದ.ಕ. ಜಿಲ್ಲೆಯಲ್ಲಿ ಪುತ್ತೂರು ತಾಲೂಕಿನ ಸಂಪ್ಯ, ಉಪ್ಪಿನಂಗಡಿ, ಬಂಟ್ವಾಳದ ಕಸಬಾ, ತುಂಬೆ, ನರಿಕೊಂಬು, ಮಂಗಳೂರು ತಾಲೂಕಿನ ಪಡೀಲ್‌ ಸಮೀಪದ ಫಸ್ಟ್‌ ನ್ಯುರೋ ಆಸ್ಪತ್ರೆ, ಕುಲಶೇಖರ ಹಾಗೂ ತೊಕ್ಕೂಟ್ಟು ಸೇರಿ ಎಂಟು ಪ್ರದೇಶಗಳು ಕಂಟೈನ್ ಮೆಂಟ್ ವಲಯದಲ್ಲಿದೆ.

Sponsors

Related Articles

Leave a Reply

Your email address will not be published. Required fields are marked *

Back to top button