ದ.16 – ಮುಸ್ಲಿಂ ಜಮಾಅತ್ ತಾಲೂಕು ಕಚೇರಿ ಉದ್ಘಾಟನೆ….

ಪುತ್ತೂರು: ಮುಸ್ಲಿಂ ಸಮುದಾಯದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಸ್ಥಾಪಿಸಲಾಗಿರುವ ಕರ್ನಾಟಕ ಮುಸ್ಲಿಂ ಜಮಾಅತ್ ಸಂಘಟನೆಯ ಪುತ್ತೂರು ತಾಲೂಕು ಕಚೇರಿಯನ್ನು ದ.16 ರಂದು ಪುತ್ತೂರು ನಗರದ ಬಸ್ಸು ನಿಲ್ದಾಣದ ಬಳಿಯಲ್ಲಿನ ಎ.ಎಂ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟಿಸಲಾಗುವುದು ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ತಾಲೂಕು ಸಮಿತಿ ಅಧ್ಯಕ್ಷ ಹಾಜಿ ಅಬ್ದುಲ್ ರಹಿಮಾನ್ ಅರಿಯಡ್ಕ ತಿಳಿಸಿದ್ದಾರೆ.
ನೂತನ ಕಚೇರಿಯನ್ನು ಯೆನಪೊಯ ಮೆಡಿಕಲ್ ಕಾಲೇಜ್‌ನ ಕುಲಪತಿ ಹಾಗೂ ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ.ಜಿಲ್ಲಾಧ್ಯಕ್ಷರಾದ ವೈ. ಮಹಮ್ಮದ್ ಕುಂಞ ಹಾಜಿ ಉದ್ಘಾಟಿಸಲಿದ್ದಾರೆ. ಮುಸ್ಲಿಂ ಜಮಾಅತ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಮೌಲಾನಾ ಶಾಫಿ ಸಅದಿ, ದ.ಕ.ಜಿಲ್ಲಾ ಕಾರ್ಯಾಧ್ಯಕ್ಷ ಎಸ್.ಎಂ.ಆರ್. ರಶೀದ್ ಹಾಜಿ, ಜಿಲ್ಲಾ ಸಂಯೋಜಕ ಅಬ್ದುಲ್ ರಶೀದ್ ಝೈನಿ ಕಾಮಿಲ್ ಸಖಾಫಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಮ್ತಾಝ್ ಅಲೀ, ಜಿಲ್ಲಾ ಖಜಾಂಜಿ ಅರಬ್ಬಿ ಹಾಜಿ ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button