ನಗರ ಪ್ರದೇಶಗಳಲ್ಲೂ ವಲಸೆ ಕಾರ್ಮಿಕರಿಗೆ ಆಹಾರ – ಕೋಟ….

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ನಗರ, ಪಟ್ಟಣ ಪ್ರದೇಶಗಳಲ್ಲಿ ಲಾಕ್‍ಡೌನ್ ಹಿನ್ನೆಲೆಯಲ್ಲಿ ಸಿಲುಕಿಕೊಂಡಿರುವ ವಲಸೆ ಕಾರ್ಮಿಕರಿಗೆ, ನಿರ್ಗತಿಕರಿಗೆ, ಭಿಕ್ಷಕುಕರಿಗೆ ಆಯಾ ಸ್ಥಳೀಯ ಸಂಸ್ಥೆಗಳ ಮೂಲಕ ಆಹಾರ ಒದಗಿಸಲಾಗುವುದು ಎಂದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳ ಸಭೆ ನಡೆಸಿ ಅವರು ಈ ವಿಚಾರ ತಿಳಿಸಿದರು. ಲಾಕ್‍ಡೌನ್‍ನಿಂದಾಗಿ ಯಾರೂ ಹಸಿವಿನಿಂದ ಇರಬಾರದು. ಈ ನಿಟ್ಟಿನಲ್ಲಿ ಆಯಾ ನಗರ ಸ್ಥಳೀಯ ಸಂಸ್ಥೆಗಳು, ತಮ್ಮ ವ್ಯಾಪ್ತಿಯಲ್ಲಿರುವ ವಲಸೆ ಕಾರ್ಮಿಕರು, ನಿರ್ಗತಿಕರನ್ನು ಗುರುತಿಸಿ ಅವರಿಗೆ ಊಟ, ತಿಂಡಿ ಒದಗಿಸಬೇಕು. ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರವನ್ನು ಅಗತ್ಯಬಿದ್ದಲ್ಲಿ ಪಡೆಯುವಂತೆ ಸಚಿವರು ತಿಳಿಸಿದರು.

Sponsors

Related Articles

Leave a Reply

Your email address will not be published. Required fields are marked *

Back to top button