ನಿಗದಿತ ಸಮಯಕ್ಕಿಂತ ಎರಡು ನಿಮಿಷ ಮುಂಚಿತವಾಗಿ ಕಾವೇರಿ ತೀರ್ಥೋದ್ಭವ….

ಕೊಡಗು: ಶ್ರೀ ಕ್ಷೇತ್ರ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಗುರುವಾರ ಮಧ್ಯರಾತ್ರಿ 12.57 ಗಂಟೆಗೆ ಕಾವೇರಿ ತೀರ್ಥೋದ್ಭವವಾಯಿತು.
ಕ್ಷೇತ್ರದ ಹಿರಿಯ ಅರ್ಚಕ ಅನಂತ ಕೃಷ್ಣಾಚಾರ್ ನೇತೃತ್ವದಲ್ಲಿ ಅರ್ಚಕರು ರಾತ್ರಿ 10 ಗಂಟೆಯಿಂದ ಬ್ರಹ್ಮಕುಂಡಿಕೆಯಲ್ಲಿ ಪೂಜಾ ಕೈಂಕರ್ಯ ನೆರವೇರಿಸಿದರು.12.59 ಕ್ಕೆ ಸಲ್ಲುವ ಕರ್ಕಾಟಕ ಲಗ್ನದಲ್ಲಿ ಪವಿತ್ರ ತೀರ್ಥೋದ್ಭವ ಆಗಲಿದೆ ಎಂದು ಕ್ಷೇತ್ರದ ತಂತ್ರಿಗಳು ಮುಹೂರ್ತ ನಿಗದಿ ಪಡಿಸಿದ್ದರು. ಕಂದಾಯ ಸಚಿವ ಆರ್. ಅಶೋಕ್, ವಸತಿ ಸಚಿವ ವಿ. ಸೋಮಣ್ಣ, ಶಾಸಕ ಕೆ.ಜಿ. ಬೋಪಯ್ಯ, ಎಂಎಲ್ಸಿಗಳಾದ ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ ಇದ್ದರು.ಮಧ್ಯರಾತ್ರಿ ಹಾಗೂ ಮಳೆ ಆತಂಕದ ನಡುವೆಯೂ ಸಹಸ್ರಾರಾರು ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button