ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ ಅಜಿತ್ ಕುಮಾರ್ ರೈ ಪುನರಾಯ್ಕೆ….

ಮಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಪ್ರತಿಷ್ಠಿತ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಜಿತ್ ಕುಮಾರ್ ರೈ ಮಾಲಾಡಿ ಬಣ ಗೆಲುವು ಸಾಧಿಸಿದೆ.
ಚುನಾವಣೆಯಲ್ಲಿ ವಿಜಯೀ ಅಭ್ಯರ್ಥಿ ಅಜಿತ್ ಕುಮಾರ್ ರೈ ಮಾಲಾಡಿ 4791 ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿ ಸುರೇಶ್ಚಂದ್ರ ಶೆಟ್ಟಿ 2193 ಮತಗಳನ್ನು ಪಡೆದು ಪರಾಭವಗೊಂಡಿದ್ದು, ಒಟ್ಟು ಮತಗಳ ಅಂತರ 2598. ಈ ಮೂಲಕ ಅಜಿತ್ ಕುಮಾರ್ ಮೂರನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button