ಪೇರಡ್ಕಕ್ಕೆ ಕೆಪಿಸಿಸಿ ಸುಳ್ಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಕೃಷ್ಣಪ್ಪ ಭೇಟಿ…

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ಉಸ್ತುವಾರಿ ಕೃಷ್ಣಪ್ಪರವರು ಫೆ. 21 ರಂದು ಪೇರಡ್ಕ ದರ್ಗಾ ಶರೀಫ್ ಗೆ ಭೇಟಿ ನೀಡಿದರು.

SKSSF ಮಾಜಿ ಅಧ್ಯಕ್ಷ ಮುನೀರ್ ದಾರಿಮಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ಪೇರಡ್ಕ ಮಸೀದಿಯ ಗೌರವಾಧ್ಯಕ್ಷ ಹಾಗೂ ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ , ಸಂಪಾಜೆ ಗ್ರಾ.ಪಂ. ಅಧ್ಯಕ್ಷ ಜಿ.ಕೆ.ಹಮೀದ್, ಮಸೀದಿಯ ಅಧ್ಯಕ್ಷರಾದ ಆಲಿಹಾಜಿ, ಸಜ್ಜನ ಪ್ರತಿಷ್ಠಾನದ ಅಧ್ಯಕ್ಷ ಡಾ| ಉಮ್ಮರ್ ಬೀಜದ ಕಟ್ಟೆ, ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ, ಪೇರಡ್ಕ ಮಸೀದಿಯ ಉಪಾಧ್ಯಕ್ಷ ಸಾಜಿದ್ ಅಝ್‌ಹರಿ, ಪಾಂಡಿ ಅಬ್ಬಾಸ್, MRDA ಅಧ್ಯಕ್ಷ ಜಾಕೀರ್‌ಹುಸೈನ್, ಸಿದ್ಧೀಕ್ ಕೊಕ್ಕೊ, ಇಕ್ಬಾಲ್ ಚೆರೂರು, ಅಬ್ದುಲ್ ಖಾದರ್ ಮೊಟ್ಟೆಂಗಾರ್, ಹನೀಫ್ ಸುಳ್ಯ ಮೊದಲಾದವರು ಉಪಸ್ಥಿತರಿದ್ದರು.

Sponsors

Related Articles

Back to top button