ಮಹಾತ್ಮ ಗಾಂಧೀಜಿಯವರ 150ನೇ ಜನ್ಮದಿನಾಚರಣೆ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಯವರ 115ನೇ ಜನ್ಮದಿನಾಚರಣೆ…

ಪುತ್ತೂರು: ರಾಷ್ಟ್ರದ ಪಿತಾಮಹ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ದಿನಾಚರಣೆಯನ್ನು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉತ್ಸಾಹದಿಂದ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ. ಎಸ್. ಗೋವಿಂದೇಗೌಡ, ಮತ್ತು ವಿಭಾಗ ಮುಖ್ಯಸ್ಥರು ಗಾಂಧೀಜಿಯವರ ಭಾವಚಿತ್ರಕ್ಕೆ ಹೂಗಳನ್ನು ಅರ್ಪಿಸಿ ಗೌವರವಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಕಾಲೇಜು ಪ್ರಾಂಶುಪಾಲ ಡಾ. ಎಂ. ಎಸ್. ಗೋವಿಂದೇಗೌಡ, ನಮ್ಮ ಜೀವನ ಮತ್ತು ದೇಶವನ್ನು ಅಭಿವೃದ್ಧಿಗೊಳಿಸುವ ಸಲುವಾಗಿ ಮಹಾತ್ಮ ಗಾಂಧೀಜಿಯವರ ಕನಸಾದ ಶಾಂತಿ ಸೌಹಾರ್ದತೆ ಹಾಗೂ ಸ್ವಚ್ಛತೆಯನ್ನು ನಮ್ಮ ಜೀವನದಲ್ಲಿ ಪಾಲಿಸಬೇಕೆಂದು ಪ್ರತಿಯೊಬ್ಬರನ್ನು ಕೋರಿದರು. ಇದೇ ಸಂದರ್ಭದಲ್ಲಿ “ಜೈ ಜವಾನ್, ಜೈ ಕಿಸಾನ್” ಘೋಷಣೆಯನ್ನು ಮೊಳಗಿಸಿದಂತಹ ಜನಪ್ರಿಯ ಮಾಜಿ ಪ್ರಧಾನ ಮಂತ್ರಿಯಾದ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರೀಯವರ 115ನೇ ಜನ್ಮದಿನಾಚರಣೆಯನ್ನೂ ಆಚರಿಸಲಾಯಿತು.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆಯ ನೆನಪಿಗಾಗಿ “ಕ್ಯಾಂಪಸ್ ಸ್ವಚ್ ಅಭಿಯಾನ”ವನ್ನು ಆಯೋಜಿಸಲಾಗಿತ್ತು. ಸ್ವಚ್ ಅಭಿಯಾನದಲ್ಲಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿದರು.

Sponsors

Related Articles

Leave a Reply

Your email address will not be published. Required fields are marked *

Back to top button