ಲಾಂಗ್ ಜಂಪ್: ಸನ್ಮಿತ್ ಆರ್.ಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ….

ಪುತ್ತೂರು: ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಸನ್ಮಿತ್ ಆರ್.ಸಿ ಲಾಂಗ್ ಜಂಪ್‍ನಲ್ಲಿ ಚಿನ್ನದ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಷ್ಟ್ರಮಟ್ಟದ ಕ್ರೀಡಾಕೂಟ ಅ.19ರಿಂದ ಅ 23ರ ವರೆಗೆ ರಾಜಸ್ಥಾನದಲ್ಲಿ ಜರಗಲಿದೆ.
ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಲಾಂಗ್‍ಜಂಪ್‍ನಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರು. ಬಳಿಕ ಶಿವಮೊಗ್ಗದ ನೆಹರೂ ಸ್ಟೇಡಿಯಂನಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಲಾಂಗ್ ಜಂಪ್‍ನಲ್ಲಿ ಚಿನ್ನದ ಪದಕ ಪಡೆದು ಆ ಬಳಿಕ ಶಿವಮೊಗ್ಗ ನೆಹರೂ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಕ್ಷೇತ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಲಾಂಗ್ ಜಂಪ್‍ನಲ್ಲಿ ಚಿನ್ನದ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸನ್ಮಿತ್ ಅವರು ಪುತ್ತೂರು ತಾಲೂಕಿನ ರೆಂಜ ನಿವಾಸಿ ಆರ್ ಸಿ ನಾರಾಯಣ ಮತ್ತು ಸುಮ ದಂಪತಿಗಳ ಪುತ್ರ.

Sponsors

Related Articles

Leave a Reply

Your email address will not be published. Required fields are marked *

Back to top button