ವಿದ್ಯಾಭಾರತಿ ಕ್ರೀಡಾಕೂಟ-ಸಾಂದೀಪನಿಯ ವಿತಾಶ್ರೀ ರಾಷ್ಟ್ರಮಟ್ಟಕ್ಕೆ…..

ಪುತ್ತೂರು: ವಿದ್ಯಾಭಾರತಿ ಕರ್ನಾಟಕ ವತಿಯಿಂದ ಶಿವಮೊಗ್ಗದಲ್ಲಿ ನಡೆದ ಜಿಲ್ಲಾ, ಪ್ರಾಂತ ಹಾಗೂ ಕ್ಷೇತ್ರ ಮಟ್ಟದ ಪ್ರೌಢಶಾಲಾ ಬಾಲಕಿಯರ ವಿಭಾಗದ ಕ್ರೀಡಾಕೂಟದಲ್ಲಿ ಗುಂಡು ಎಸೆತ, ಚಕ್ರ ಎಸೆತ ಮತ್ತು ಈಟಿ ಎಸೆತ ಸ್ಪರ್ಧೆಗಳಲ್ಲಿ ನರಿಮೊಗರಿನ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿನಿ ವಿತಾಶ್ರೀ.ವಿ. ಗೌಡ ಅವರು 7 ಚಿನ್ನ ಮತ್ತು 2 ಬೆಳ್ಳಿ ಪದಕಗಳೊಂದಿಗೆ ವೈಯಕ್ತಿಕ ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಈ ಸಾಧನೆಯೊಂದಿಗೆ ವಿತಾಶ್ರೀ ಅವರು ರಾಜಸ್ಥಾನದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿದ್ದಾರೆ. ಕಲ್ಕಾರು ವಿಶ್ವನಾಥ ಗೌಡ ಮತ್ತು ಮೋಹಿನಿ ದಂಪತಿ ಪುತ್ರಿಯಾದ ವಿತಾಶ್ರೀ ಅವರಿಗೆ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಸಾದ್ ಕುಮಾರ್.ಎಂ ಮತ್ತು ಕಿಶನ್ ರಾಜ್ ರೈ ಅವರು ತರಬೇತಿ ನೀಡಿದ್ದಾರೆ ಎಂದು ಸಂಸ್ಥೆಯ ಮುಖ್ಯ ಶಿಕ್ಷಕಿ ಜಯಮಾಲಾ.ವಿ.ಎನ್. ತಿಳಿಸಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button