ವಿದ್ಯಾರ್ಥಿಗಳಿಗಾಗಿ ಕೆರಿಯರ್ ಕೌನ್ಸೆಲಿಂಗ್ ಕಾರ್ಯಕ್ರಮ….

ಪುತ್ತೂರು: ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದ ಆಶ್ರಯದಲ್ಲಿ ಬೆಟ್ಟಂಪಾಡಿ ಸರಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಕೆರಿಯರ್ ಕೌನ್ಸೆಲಿಂಗ್ ಎನ್ನುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಬೆಳಿಗ್ಗೆ ನಡೆದ ಸಭಾಕಾರ್ಯಕ್ರಮದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ರಾವ್.ಪಿ, ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದೇಗೌಡ, ಎಂಬಿಎ ವಿಭಾಗದ ನಿರ್ದೇಶಕ ಡಾ.ಶೇಖರ್.ಎಸ್.ಅಯ್ಯರ್, ಬೆಟ್ಟಂಪಾಡಿ ಕಾಲೇಜಿನ ಡಾ.ಪ್ರಸಾದ್ ಕುಲಕರ್ಣಿ, ಕಾರ್ಯಕ್ರಮ ಸಂಯೋಜಕ ಪ್ರೊ. ನಾರಾಯಣ ನಾಯಕ್.ಎ ಭಾಗವಹಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಕಾಲೇಜಿನ ಉಪನ್ಯಾಸರು ವ್ಯಕ್ತಿತ್ವವಿಕಸನ, ನಾಯಕತ್ವ, ಕೌಶಲಾಭಿವೃದ್ದಿಯ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ನಡೆಸಿದರು.
ಇದೇ ಸಂದರ್ಭದಲ್ಲಿ ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಸಿಸ್ಟೆಂಟ್ ಪ್ರೊಫೆಸರ್ ಡಾ.ಪ್ರಸಾದ್ ಕುಲಕರ್ಣಿ ಅವರು ಎಂಬಿಎ ವಿದ್ಯಾರ್ಥಿಗಳಿಗೆ ಅಗತ್ಯ ಕಂಪ್ಯೂಟರ್ ತಿಳುವಳಿಕೆ ಮತ್ತು ಸಂಶೋಧನಾ ಪ್ರಬಂಧ ತಯಾರಿಕೆಯ ಬಗ್ಗೆ ಮಾಹಿತಿಯನ್ನು ನೀಡಿದರು.
ಬೆಟ್ಟಂಪಾಡಿ ಕಾಲೇಜಿನ ವಿದ್ಯಾರ್ಥಿಗಳು ಮತ್ತು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದ ವಿದ್ಯಾರ್ಥಿಗಳು ಪಾಲ್ಗೊಂಡರು.

Sponsors

Related Articles

Leave a Reply

Your email address will not be published. Required fields are marked *

Back to top button