ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ….

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಹಾಗೂ ಜಿಲ್ಲಾ ಮಹಿಳಾ ಮಂಡಲ ಒಕ್ಕೂಟ (ರಿ) ಮಂಗಳೂರು ತಾಲೂಕು ಮಹಿಳಾ ಮಂಡಲ (ರಿ)ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಕಲ್ಲಡ್ಕ ಜಾನ್ಸಿ ಮಹಿಳಾ ಮಂಡಲ ಮತ್ತು ಜ್ಞಾನ ವಿಕಾಸ ಕೇಂದ್ರದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಕಲ್ಲಡ್ಕ ನೇತಾಜಿ ಯುವಕ ಮಂಡಲ ಸಭಾಂಗಣದಲ್ಲಿ ನಡೆಯಿತು.
ಜಾನ್ಸಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಆರ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಮಂಡಲದ ಗೌರವ ಅಧ್ಯಕ್ಷೆ ಡಾ. ಕಮಲಾ ಪ್ರಭಾಕರ ಭಟ್ ದೀಪ ಬೆಳಗಿಸಿ ಉದ್ಘಾಟಿಸಿ ಸಮಾಜದ ಪರಿವರ್ತನೆಯಲ್ಲಿ ಮಹಿಳೆಯರ ಪಾತ್ರದ ಬಗ್ಗೆ ಬೆಳಕು ಚೆಲ್ಲಿದರು .ಈ ಸಂದರ್ಭದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪಡೆದ ಹರಿಣಿ ಸದಾಶಿವ ಹಾಗೂ ಕಮಲಾ ನಾಯ್ಕ ಕುಂಟಿಪಾಪು ಇವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ತಾಲೂಕು ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ರಾವ್, ವಿಟ್ಲ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಜಯ ರೈ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಯ ನಿವೃತ್ತ ಅಧಿಕಾರಿ ಶ್ರೀಮತಿ ಸರಸ್ವತಿ ಉಪಸ್ಥಿತರಿದ್ದರು.
ಜಾನ್ಸಿ ಮಹಿಳಾ ಮಂಡಲ ಸದಸ್ಯ ಶ್ರೀಮತಿ ಶ್ರೀಲತಾ ಸ್ವಾಗತಿಸಿ ಸೇವಾಪ್ರತಿನಿಧಿ ಶ್ರೀಮತಿ ಮಾಲತಿ ನೆಟ್ಲ ವಂದಿಸಿ ಜ್ಞಾನವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಶ್ರೀಮತಿ ನಳಿನಾಕ್ಷಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Sponsors

Related Articles

Leave a Reply

Your email address will not be published. Required fields are marked *

Back to top button