ಶ್ರೀ ಬಾಲಗಣಪತಿ ದೇವಸ್ಥಾನ ಅನ್ನಪಾಡಿ – ತೋರಣ ಮುಹೂರ್ತ, ಕೊಪ್ಪರಿಗೆ ಮುಹೂರ್ತ, ಉಗ್ರಾಣ ಮುಹೂರ್ತ…

ಬಂಟ್ವಾಳ: ಶ್ರೀ ಬಾಲಗಣಪತಿ ದೇವಸ್ಥಾನ ಅನ್ನಪಾಡಿ ಸಜೀಪಮೂಡ ಇದರ ನವೀಕರಣ ಪುನಃಪ್ರತಿಷ್ಠಾಪನ ಅಷ್ಟಬಂಧ ಬ್ರಹ್ಮಕಲಶೋತ್ಸವ, ಪ್ರಥಮ ಜಾತ್ರಾ ಮಹೋತ್ಸವ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲ್ಲತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಡಿ. 27 , 28 , 29 ರಂದು ಮೂರು ದಿನಗಳ ಪರ್ಯಂತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದ್ದು, ಆ ನಿಮಿತ್ತ ಇಂದು ಶ್ರೀಕ್ಷೇತ್ರದಲ್ಲಿ ತೋರಣ ಮುಹೂರ್ತ, ಕೊಪ್ಪರಿಗೆ ಮುಹೂರ್ತ, ಉಗ್ರಾಣ ಮುಹೂರ್ತವನ್ನು ಸಜೀಪ ಮಾಗಣೆಯ ತಂತ್ರಿ ಎಂ ಸು ಬ್ರಹ್ಮಣ್ಯ ಭಟ್ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿದ್ಯುಕ್ತವಾಗಿ ನೆರವೇರಿಸಿದರು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಯಶವಂತ ದೇರಾಜೆ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶ್ರೀಕಾಂತ ಶೆಟ್ಟಿ, ಗೌರವಾಧ್ಯಕ್ಷ ಕೆ ಸದಾನಂದ ಶೆಟ್ಟಿ, ಪ್ರೇಮ ಜಿ. ಶೆಟ್ಟಿ, ಲಿಂಗಪ್ಪ ದೊಟ, ರಮೇಶ, ದೇವದಾಸ, ಸುರೇಶ್ ಪೂಜಾರಿ , ಪದ್ಮಾವತಿ ಪೂಜಾರಿ, ಜಯಪ್ರಕಾಶ್, ವಿಶ್ವನಾಥ ಬೆಲ್ಚಡ, ಭಾಸ್ಕರ, ಪ್ರಶಾಂತ್ ಮೊದಲಾದವರು ಉಪಸ್ಥಿತರಿದ್ದರು.

Sponsors

Related Articles

Back to top button