ಶ್ರೀರಾಮ ಪದವಿ ಪೂರ್ವ ಕಾಲೇಜು, ಕಲ್ಲಡ್ಕ: ಚೆಸ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ…..

ಬಂಟ್ವಾಳ:ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಹಾಗೂ ವಿವೇಕಾನಂದ ಪದವಿಪೂರ್ವ ವಿದ್ಯಾಲಯ ಪುತ್ತೂರು ಇದರ ಆಶ್ರಯದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಚೆಸ್ ಸ್ಪರ್ಧೆಯಲ್ಲಿ ಶ್ರೀರಾಮ ಪದವಿಪೂರ್ವ ಕಾಲೇಜು, ಹನುಮಾನ್ ನಗರ ಕಲ್ಲಡ್ಕ ಇಲ್ಲಿನ ವಿದ್ಯಾರ್ಥಿನಿಯರಾದ ರಕ್ಷಾ ಪಿ, ಪ್ರಥಮ ವಿಜ್ಞಾನ ವಿಭಾಗ ಹಾಗೂ ಯಶಸ್ವಿ, ಪ್ರಥಮ ವಾಣಿಜ್ಯ ವಿಭಾಗ ಇವರು ಕ್ರಮವಾಗಿ ಪ್ರಥಮ ಹಾಗೂ ಚತುರ್ಥ ಸ್ಥಾನದೊಂದಿಗೆ ದ್ವಿತೀಯ ಸಮಗ್ರ ತಂಡ ಪ್ರಶಸ್ತಿ ಪಡೆದು ಚಿಕ್ಕಮಂಗಳೂರು ಜಿಲ್ಲೆಯಲ್ಲಿ ನಡೆಯುವ ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಚೆಸ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

Sponsors

Related Articles

Leave a Reply

Your email address will not be published. Required fields are marked *

Back to top button